Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಸೈಬರ್ ವಂಚನೆ ಮತ್ತು ಮೊಬೈಲ್ ಫೋನ್ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಒಂದು ದಿಟ್ಟ ಕ್ರಮ ಕೈಗೊಂಡಿದೆ. ಭಾರತೀಯ ದೂರಸಂಪರ್ಕ ಸಚಿವಾಲಯವು, ದೇಶದಲ್ಲಿ ಮಾರಾಟವಾಗುವ ಪ್ರತಿಯೊಂದು ಹೊಸ ಸ್ಮಾರ್ಟ್ಫೋನ್ನಲ್ಲಿ ಸರ್ಕಾರದ ‘ಸಂಚಾರ್ ಸಾಥಿ’ ಎಂಬ ಸೈಬರ್ ಸುರಕ್ಷತಾ ಅಪ್ಲಿಕೇಶನ್ ಅನ್ನು ಪ್ರಿ ಇನ್ಸ್ಟಾಲ್ ಮಾಡುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ
ಬೇರೆಯವರ ಆಧಾರ್ ಕಾರ್ಡ್ ಬಳಸಿಕೊಂಡು ಅಕ್ರಮವಾಗಿ ಸಿಮ್ ಖರೀದಿ, ಮೊಬೈಲ್ ಕಳ್ಳತನ, ಪ್ರತಿ ಮೊಬೈಲ್ ನೀಡಲಾಗುವ ಅಂತರಾಷ್ಟ್ರೀಯ ಮೊಬೈಲ್ ಗುರುತಿನ ಸಂಖ್ಯೆ(ಐಎಂಇಐ) ನಕಲು ಮಾಡುವುದು ಸೇರಿದಂತೆ ಹಲವು ವಂಚನೆಗಳಿಂದ ಜನರನ್ನು ರಕ್ಷಿಸಲು ಎಲ್ಲಾ ಮೊಬೈಲ್ ಗಳಲ್ಲಿ ಸಂಚಾರ ಸಾಥಿ ಮೊಬೈಲ್ ಅಪ್ಲಿಕೇಶನ್ ಇನ್ಸ್ಟಾಲ್ ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ.
ದೇಶದ ಎಲ್ಲ ಮೊಬೈಲ್ ತಯಾರಕರಿಗೆ, ಮೊಬೈಲ್ ಸೆಟ್ ಆಮದು ಮಾಡಿಕೊಳ್ಳುವ ಕಂಪನಿಗಳಿಗೆ ದೂರ ಸಂಪರ್ಕ ಸಚಿವಾಲಯವು ಕೆಲವು ನಿರ್ದೇಶನಗಳನ್ನು ನೀಡಿ ಆದೇಶ ಹೊರಡಿಸಿದೆ.