ಎಲ್ಲರ ಜೊತೆ ಗೋಲ್ಗಪ್ಪ ತಿನ್ನಲು ಹೋಗಿದ್ದ ಮಹಿಳೆ ಬಾಯಿ ಮುಚ್ಚದೆ ಇರುವ ಘಟನೆ ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ನಡೆದಿದೆ.
ಕಾಕೋರ್ ಬಳಿಯ ಗೌರಿ ಕಿಶನ್ಪುರದ ನಿವಾಸಿ ವೀರೇಂದ್ರ ಅವರ ಪತ್ನಿ ಇಂಕಲಾ ದೇವಿ, ಸೊಸೆಗೆ ಹೆರಿಗೆ ನೋವು ಕಾಣಿಸಿಕೊಳ್ತಿದ್ದಂತೆ ಆಸ್ಪತ್ರೆಗೆ ಬಂದಿದ್ದರು. ಆಸ್ಪತ್ರೆಯಲ್ಲಿಯೇ ಅವರು ಉಳಿದುಕೊಂಡಿದ್ರು. ನಿನ್ನೆ ಪಕ್ಕದಲ್ಲಿದ್ದ ಅಂಗಡಿಯಲ್ಲಿ ಗೋಲ್ಗಪ್ಪ ತಿನ್ನಲು ಮುಂದಾಗಿದ್ದಾರೆ.
ಎಲ್ಲರ ಜೊತೆ ಗೋಲ್ಗಪ್ಪ ತಿನ್ನುತ್ತಿದ್ದ ಇಂಕಲಾ ದೇವಿಗೆ ಬಾಯಿ ತೆರೆಯುತ್ತಿದ್ದಂತೆ ಶಾಕ್ ಆಗಿದೆ. ತೆರೆದ ಬಾಯಿಯನ್ನು ಮುಚ್ಚಲು ಸಾಧ್ಯವೇ ಆಗ್ಲಿಲ್ಲ. ಇದ್ರಿಂದ ಅಕ್ಕಪಕ್ಕದವರು ಆಘಾತಕ್ಕೊಳಗಾಗಿದ್ದಾರೆ. ಇಂಕಲಾ ದೇವಿ ಸ್ಥಿತಿ ನೋಡಿದ ಸಂಬಂಧಿಕರು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ವೈದ್ಯರು ಪ್ರಥಮ ಚಿಕಿತ್ಸೆ ನೀಡಿದ್ರೂ ಪ್ರಯೋಜನ ಆಗ್ಲಿಲ್ಲ. ನಂತ್ರ ಇಂಕಲಾ ದೇವಿಯವರನ್ನು ಹತ್ತಿರದ ದೊಡ್ಡ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.