newsics.com
ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ಹೈಕಮಾಂಡ್ ಪ್ರಯತ್ನಪಟ್ಟರೆ ಅವರ ವಿರುದ್ಧವೂ ಹೋರಾಟ ಮಾಡಬೇಕಾಗುತ್ತದೆ ಎಂದು ಶೋಷಿತ ಸಮುದಾಯಗಳ ಒಕ್ಕೂಟ ಕಾಂಗ್ರೆಸ್ ಹೈಕಮಾಂಡ್ಗೆ ಎಚ್ಚರಿಕೆ ನೀಡಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶೊಷಿತ ಸಮಯದಾಯಗಳ ಒಕ್ಕೂಟದ ಮುಖಂಡರು, ಸಿದ್ದರಾಮಯ್ಯ ಅವರು ಇನ್ನೊಂದು ಬಾರಿ ಮುಖ್ಯಮಂತ್ರಿ ಆಗುತ್ತಾರೆ ಎನ್ನುವ ಕಾರಣಕ್ಕೆ ಅಹಿಂದ ಮತಗಳು ಕಾಂಗ್ರೆಸ್ ಪಕ್ಷಕ್ಕೆ ಬಂದಿವೆ. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಬರುತ್ತಿರಲಿಲ್ಲ ಎಂದು ಒಕ್ಕೂಟದ ಅಧ್ಯಕ್ಷ ಕೆ.ಎಂ. ರಾಮಚಂದ್ರಪ್ಪ ಪರೋಕ್ಷವಾಗಿ ಕಾಂಗ್ರೆಸ್ ಮುಖಂಡರಿಗೆ ಎಚ್ಚರಿಕೆ ನೀಡಿದರು.
ಉದ್ದೇಶಪೂರ್ವಕವಾಗಿ ಸಿದ್ದರಾಮಯ್ಯ ಹೆಸರಿಗೆ ಕಳಂಕ ತರುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಸಿದ್ದರಾಮಯ್ಯ ಕಳಂಕರಹಿತರು. ಆದರೆ ರಾಜಕೀಯ ದುರುದ್ದೇಶದಿಂದ ಆರೋಪ ಮಾಡಲಾಗುತ್ತಿದೆ. ರಾಜಕೀಯ ಹಿತಾಸಕ್ತಿ ಕಾಪಾಡಿಕೊಳ್ಳಲು ಬಿಜೆಪಿಯವರು ಹೀಗೆ ಆರೋಪ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಪರ ವಕಾಲತ್ತು ವಹಿಸಿದರು.
ಒಂದು ವೇಳೆ ಸಂಚುಮಾಡಿ ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿದರೆ ರಾಜ್ಯದಲ್ಲಿ ದಂಗೆ ಏಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಬಿಜೆಪಿಯವರ ಹಾಗೂ ಕಾಂಗ್ರೆಸ್ ಪಕ್ಷದಲ್ಲಿರುವವರ ಕೆಲವರ ಮಾತನ್ನು ಕೇಳಿ ಹೈಕಮಾಂಡ್ ಏನಾದ್ರೂ ಸಿದ್ದರಾಮಯ್ಯ ವಿರುದ್ಧ ನಿರ್ಣಯ ಕೈಗೊಂಡರೆ ಮುಂದೆ ಆಗುವ ಘಟನೆಗಳಿಗೆ ಕೇಂದ್ರ ಬಿಜೆಪಿಯೇ ಹೊಣೆಯಾಗಬೇಕಾಗುತ್ತದೆ. ಬಿಜೆಪಿಯವರು ಬೆಂಗಳೂರಿನಿಂದ ಪಾದಯಾತ್ರೆ ಬಂದರೆ ನಾವು ಮೈಸೂರಿನಿಂದ ಪಾದಯಾತ್ರೆ ಮಾಡಬೇಕಾಗುತ್ತದೆ ಎಂದೂ ಎಚ್ಚರಿಸಿದರು.
ಶಾಸಕರನ್ನು ಹೈಜಾಕ್ ಮಾಡಿಯೇ ಕುಮಾರಸ್ವಾಮಿ ಅಧಿಕಾರಕ್ಕೆ ಬಂದಿದ್ದು, ಜೆಡಿಎಸ್ ಅಧಿಕಾರದ ಹತ್ತಿರಕ್ಕೇ ಹೋಗಿಲ್ಲ. ಇದೇ ರೀತಿ ಮುಂದುವರಿದರೆ ರಾಜ್ಯದಲ್ಲಿ ದಂಗೆ ಏಳಬೇಕಾಗುತ್ತದೆ ಎಂದು ಒಕ್ಕೂಟ ಎಚ್ಚರಿಸಿದೆ. ಸಿಎಂ ಸಿದ್ದರಾಮಯ್ಯ ಅವರ ಹೆಸರಿಗೆ ಕಳಂಕ ತರುವ ಹುನ್ನಾರ ನಡೆದರೆ ಕೇಂದ್ರ ಸರ್ಕಾರದ ವಿರುದ್ಧವೂ ದಂಗೆ ಏಳಬೇಕಾಗುತ್ತದೆ ಎಂದು ಮಾವಳ್ಳಿ ಶಂಕರ್ ಎಚ್ಚರಿಸಿದರು.
VIDEO: ಒಲಿಂಪಿಕ್ಸ್ ನಲ್ಲಿ ನೀಡಲಾಗಿದ್ದ ಕಾಂಡೋಮ್ ಅನ್ ಬಾಕ್ಸಿಂಗ್ ಮಾಡಿದ ಮಹಿಳಾ ಸ್ಪರ್ಧಿ
ಕಿಸ್ಗೆ 110 ರೂ, ಅಪ್ಪುಗೆಗೆ 11 ರೂ., ಇದು ಸ್ಟ್ರೀಟ್ ಗರ್ಲ್ಫ್ರೆಂಡ್
ಕೇರಳ ಭೂಕುಸಿತಕ್ಕೆ ಕಾರಣ ಶುಂಠಿ ಬೆಳೆನಾ? ಈ ಬಗ್ಗೆ ವಿಜ್ಞಾನಿಗಳು ಹೇಳಿದ್ದು…