Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಕರ್ನಾಟಕದಲ್ಲಿ ತಾಪಮಾನ ಮತ್ತಷ್ಟು ಇಳಿಕೆ ಆಗಿದ್ದು, ಚಳಿ ಪ್ರಮಾಣ ಹೆಚ್ಚಾಗುತ್ತಿದೆ. ಮಂಗಳವಾರ ಬೀದರ್ ಜಿಲ್ಲೆಗೆ ಶೀತದ ಅಲೆ ಎಚ್ಚರಿಕೆ ನೀಡಲಾಗಿತ್ತು. ಇದೀಗ ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಿಗೆ ಶೀತದ ಅಲೆ ಎಚ್ಚರಿಕೆ ನೀಡಲಾಗಿದೆ. ಇತರ ಜಿಲ್ಲೆಗಳಲ್ಲೂ ಬೆಳಗ್ಗೆ, ರಾತ್ರಿ ದಟ್ಟ ಮಂಜು ಆವರಿಸಲಿದೆ.
ತಂಪು ವಾತಾವರಣ ಹೆಚ್ಚಾಗಲಿದೆ. ರಾಜ್ಯಾದ್ಯಂತ ಒಣಹವೆ, ಹಗಲು ಉರಿ ಬಿಸಿಲು ದಾಖಲಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಕರ್ನಾಟಕ ಕೇಂದ್ರ ಮುನ್ಸೂಚನೆ ನೀಡಿದೆ.
ಮುಂದಿನ ಮೂರು ದಿನ ವಾತಾವರಣದಲ್ಲಿ ಶೀತದ ಅಲೆಗಳ ಪ್ರಭಾವ ಹೆಚ್ಚಿರಲಿದೆ. ಇಡೀ ರಾಜ್ಯದಲ್ಲಿ ತಂಪು ವಾತಾವರಣವು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಹೆಚ್ಚಾಗಿರಲಿದೆ. ಬೆಳಗಾವಿ, ಬಾಗಲಕೋಟೆ, ಬೀದರ್, ವಿಜಯಪುರ, ಕಲಬುರಗಿ, ಧಾರವಾಡ, ಗದಗ, ಹಾವೇರಿ ಸೇರಿದಂತೆ ಪ್ರತ್ಯೇಕ ಪ್ರದೇಶಗಳಲ್ಲಿ ಶೀತ ಅಲೆಯ ಎಚ್ಚರಿಕೆ ನೀಡಲಾಗಿದೆ. ಇಲ್ಲಿ ಬೆಳಗ್ಗೆ ಮಂಜಿನ ವಾತಾವರಣ ಸಹಿತ ಚಳಿ ಹೆಚ್ಚಿರಲಿದೆ. ಉಳಿದಂತೆ ಮಧ್ಯಾಹ್ನದಿಂದ ಸಂಜೆವರೆಗೆ ಒಣಹವೆಯು ನಿರ್ಮಾಣವಾಗಲಿದೆ.
ಕರಾವಳಿ ಭಾಗದ ಮೂರು ಜಿಲ್ಲೆಗಳು, ಮಲೆನಾಡಿನ ಭಾಗ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಜತೆ ಹೆಚ್ಚಿನ ಚಳಿ ಆವರಿಸಲಿದೆ. ಕನಿಷ್ಠ ತಾಪಮಾನದಲ್ಲಿ ಬದಲಾವಣೆ ಆಗಲಿದೆ. ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರ ಮೇಲ್ಮೈನಲ್ಲಿನ ಕಡಿಮೆ ಒತ್ತಡದ ಪ್ರದೇಶವು ದುರ್ಬಲಗೊಂಡ ಹಿನ್ನೆಲೆಯಲ್ಲಿ ಸ್ಪಷ್ಟ ನೀಲಿ ಆಕಾಶ ಇರಲಿದೆ. ಈ ವೇಳೆ ಮಧ್ಯಾಹ್ನ ಗರಿಷ್ಠ ತಾಪಮಾನ ನಿರೀಕ್ಷೆ ಇದೆ. ಮುಂದಿನ ದಿನಗಳಲ್ಲಿ ಉತ್ತರ ಕರ್ನಾಟಕಕ್ಕೆ ಸೀಮಿತವಾಗಿರುವ ಶೀತದ ಅಲೆಗಳು ಬೆಂಗಳೂರು, ಮಂಡ್ಯ, ಮೈಸೂರು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ವಿಸ್ತರಿಸಲೂ ಬಹುದು.
ಬೆಂಗಳೂರಿನಲ್ಲಿ ಮಬ್ಬು ಕವಿದ ವಾತಾವರಣ ಮರೆಯಾಗಿದೆ. ಸ್ವಚ್ಛ ಆಕಾಶ ಕಂಡುಬಂದಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು, ಚಳಿ ಏರಿಕೆಯ ಸಾಧ್ಯತೆ ಇದೆ. ಇಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ಗೆ ಕುಸಿಯುವ ನಿರೀಕ್ಷೆ ಇದೆ.
ಬಂಗಾಳಕೊಲ್ಲಿಯಲ್ಲಿ ವೈಪರೀತ್ಯ ಉಂಟಾಗಿದೆ. ಹೀಗಾಗಿ ಉಡುಪಿ, ಉತ್ತರ ಕನ್ನಡ, ಮಂಗಳೂರು, ದಕ್ಷಿಣ ಕನ್ನಡ ಭಾಗಗಳಲ್ಲಿ ಮಳೆ ಬರುವ ನಿರೀಕ್ಷೆ ಇದೆ ಎನ್ನಲಾಗಿದೆ. ಆದರೆ ಮಳೆ ಬರುವಿಕೆ ಬಗ್ಗೆ ಐಎಂಡಿ ಖಚಿತಪಡಿಸಿಲ್ಲ.
ಈ ಜೋಡಿಯ ವಿಚ್ಛೇದನಕ್ಕೆ ಕಾರಣವಾಯ್ತು ಈರುಳ್ಳಿ- ಬೆಳ್ಳುಳ್ಳಿ, 11 ವರ್ಷದ ಸಂಸಾರಕ್ಕೇನಾಯ್ತು?
ಮಗಳನ್ನು ಅಸಭ್ಯವಾಗಿ ಮುಟ್ಟಿದ್ದಕ್ಕೆ ಲಿವ್ ಇನ್ ಪಾರ್ಟ್ನರ್ನನ್ನು ಕೊಂದ ಎರಡು ಮಕ್ಕಳ ತಾಯಿ