Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ರೌಡಿಶೀಟರ್ಗಳನ್ನು ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಪ್ರಕ್ರಿಯೆ ನಿಗದಿ ಮಾಡಲಾಗಿದೆ. ಎಸ್ಎಂಎಸ್ ಅಥವಾ ವಾಟ್ಸಾಪ್ ಮೂಲಕ ಪೊಲೀಸ್ ಠಾಣೆಗೆಕರೆಸಬಹುದು ಎಂದು ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ದ ಹೈಕೋರ್ಟ್ ಪೀಠ ಬುಧವಾರ ಆದೇಶ ಹೊರಡಿಸಿದೆ. ಆ ಮೂಲಕ ಮೌಖಿಕವಾಗಿ ಪೊಲೀಸ್ ಠಾಣೆಗೆ ರೌಡಿಶೀಟರ್ಗಳನ್ನು ಕರೆಸುವುದಕ್ಕೆ ಬ್ರೇಕ್ ಬಿದ್ದಂತಾಗಿದೆ.
ಎಸ್ಎಂಎಸ್, ವಾಟ್ಸಾಪ್ ಮೂಲಕ ಪೊಲೀಸ್ ಠಾಣೆಗೆ ಕರೆಸಬಹುದು. ಠಾಣೆಗಳಿಗೆ ರೌಡಿಶೀಟರ್ ಗಳು ತಮ್ಮ ಮೊಬೈಲ್ ನಂಬರ್ ನೀಡಬೇಕು. ಮೌಖಿಕವಾಗಿ ಕರೆಯುವ ಬದಲು ಎಸ್ಎಂಎಸ್, ವಾಟ್ಸಾಪ್ ಸಂದೇಶ ನೀಡಬೇಕು. ಆಗಲೂ ಠಾಣೆಗೆ ಬರದಿದ್ದರೆ ರೌಡಿಶೀಟರ್ ಮನೆಗೆ ಪೊಲೀಸರು ತೆರಳಬಹುದು. ಸರ್ಕಾರ ಕಾನೂನು ರೂಪಿಸುವವರೆಗೆ ಈ ಪ್ರಕ್ರಿಯೆ ಪಾಲಿಸಲು ಸೂಚನೆ ನೀಡಲಾಗಿದೆ.