Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿದ್ಯಾರ್ಥಿನಿ ಜತೆ ಪ್ರಾಂಶುಪಾಲ ಅಸಭ್ಯ ವರ್ತನೆ: ದೂರು ದಾಖಲಿಸಿಕೊಳ್ಳಲು ಪೊಲೀಸರ ನಕಾರ
ಕರ್ನಾಟಕಪ್ರಮುಖ

ವಿದ್ಯಾರ್ಥಿನಿ ಜತೆ ಪ್ರಾಂಶುಪಾಲ ಅಸಭ್ಯ ವರ್ತನೆ: ದೂರು ದಾಖಲಿಸಿಕೊಳ್ಳಲು ಪೊಲೀಸರ ನಕಾರ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಳಗಾವಿ: ಪ್ರಾಂಶುಪಾಲ ವಿದ್ಯಾರ್ಥಿನಿ ಜತೆಗೆ ಅಸಭ್ಯವಾಗಿ ವರ್ತನೆ ಮಾಡಿದ್ದಾನೆ ಎಂದು ಗ್ರಾಮಸ್ಥರು ಧರ್ಮದೇಟು ನೀಡಿರುವ ಘಟನೆ ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದಲ್ಲಿ ನಡೆದಿದೆ.

ಕೆಲವು ದಿನಗಳಿಂದ ಪ್ರಾಂಶುಪಾಲ ಕಲ್ಲಪ್ಪ ಬೆಳಗಾಂವಕರ್ ವಿದ್ಯಾರ್ಥಿನಿಗಳ ಜತೆಗೆ ಅಸಭ್ಯವಾಗಿ ವರ್ತನೆ ಮಾಡುತ್ತಿದ್ದಾನೆ ಎಂಬ ದೂರು ಕೇಳಿ ಬರುತ್ತಿತ್ತು. ಈ ಬಗ್ಗೆ ಪೋಷಕರು ಹಾಗೂ ಶಾಲೆಯ ವಿದ್ಯಾರ್ಥಿಗಳು ಸ್ಥಳೀಯ ನಾಯಕರಿಗೆ ದೂರು ನೀಡಿದ್ದರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಹೇಳಲಾಗಿದೆ. ಇದರಿಂದ ಆಕ್ರೋಶಗೊಂಡು ವಿದ್ಯಾರ್ಥಿನಿಯರ ಪೋಷಕರು ಶಾಲೆಗೆ ಧಾವಿಸಿ ಪ್ರಾಂಶುಪಾಲ ಕಲ್ಲಪ್ಪ ಬೆಳಗಾಂವಕರ್ಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಪೋಷಕರು ಹಾಗೂ ಗ್ರಾಮಸ್ಥರು ಶಾಲೆ ಬಂದು ಪ್ರಾಂಶುಪಾಲನ್ನು ಕೊಠಡಿಯಿಂದ ಹೊರಗೆ ಎಳೆದುಕೊಂಡು ಬಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಇದೇ ವೇಳೆ ಕೆಲವರು ಕಲ್ಲಪ್ಪ ಬೆಳಗಾಂವಕರ್ಗೆ ಧರ್ಮದೇಟು ನೀಡಿದ್ದಾರೆ. ಜತೆಗೆ ವಿದ್ಯಾರ್ಥಿನಿಗಳು ಕೂಡ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲೆಯ ಆವರಣದಲ್ಲಿ ಕೆಲಹೊತ್ತು ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಶಾಲೆ ಬಂದು ಪ್ರಾಂಶುಪಾಲ ಕಲ್ಲಪ್ಪ ಬೆಳಗಾಂವಕರ್ನ್ನು ರಕ್ಷಿಸಿದ್ದಾರೆ.

ಇನ್ನು ಈ ಘಟನೆ ನಡೆದು ಒಂದು ದಿನ ಕಳೆದರು ಪೊಲೀಸರು ಪ್ರಾಂಶುಪಾಲನ ಮೇಲೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಇದೀಗ ಈ ಪ್ರಕರಣಕ್ಕೆ ಸಾಕ್ಷಿಯಾಗಿ ವಿದ್ಯಾರ್ಥಿನಿ ಜೊತೆಗೆ ಅಶ್ಲೀಲ ಮೆಸೇಜ್ ಮಾಡಿದ ಚಾಟೀಂಗ್ ಕೂಡ ಸಿಕ್ಕಿದೆ. ಇನ್ನು ಈ ಬಗ್ಗೆ ಖುದ್ದು ವಿದ್ಯಾರ್ಥಿನಿಯೇ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದಾಳೆ.ಆದರೂ ಪೊಲೀಸರು ಕ್ರಮ ಕೈಗೊಂಡಿಲ್ಲ. ಇದೀಗ ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಪೊಲೀಸರ ನಡೆಯ ಬಗ್ಗೆ ಮಾಜಿ ಶಾಸಕ ಸಂಜಯ್ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಿನ್ಸಿಪಲ್ ಕಾಂಗ್ರೆಸ್ ಕಾರ್ಯಕರ್ತ ಹಾಗೂ ಸಚಿವರ ಆಪ್ತ ಎಂದು ಹೇಳಿದ್ದಾರೆ. ಪರೋಕ್ಷವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತ ಎಂದು ಶಾಸಕ ಹೇಳಿದ್ದಾರೆ.

ಸಚಿವರ ಆಪ್ತ ಎಂಬ ಕಾರಣಕ್ಕೆ ಒತ್ತಡ ಹಾಕಿ ದೂರು ದಾಖಲಿಸಿಕೊಂಡಿಲ್ಲ, ವಿಚಾರಣೆ ಮಾಡಿ ಬಿಟ್ಟು ಕಳಿಸಿದ್ದಾರೆ. ಹೆಣ್ಣು ಮಗುವಿನ ಭವಿಷ್ಯದ ದೃಷ್ಟಿಯಿಂದ ರಾಜಕಾರಣ ಮಾಡಲ್ಲ. ಆದ್ರೇ ತಪ್ಪು ಮಾಡಿದ ಪ್ರಿನ್ಸಿಪಲ್ ಗೆ ಶಿಕ್ಷೆಯಾಗಬೇಕು. ಅಂದು ಸ್ಥಳೀಯ ಶಾಸಕಿ ಸಾರಾಯಿ ಕುಡಿತಾರೆ ಅಂದಿದ್ದಕ್ಕೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದರು. ಈಗ ಎಲ್ಲಿಗೆ ಹೋಗಿದ್ದಾರೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ಬಿಜೆಪಿ ಎಂದು ರಾಜಕಾರಣ ಮಾಡೋದು ಬೇಡ, ಸಚಿವರ ಬಳಿಯೂ ಮನವಿ ಮಾಡುವೆ. ವಿದ್ಯಾರ್ಥಿನಿಗೆ ನ್ಯಾಯ ಸಿಗಲಿ ಪ್ರಿನ್ಸಿಪಲ್ ಗೆ ಶಿಕ್ಷೆ ಕೊಡಿಸಿ. ನೀವು ನ್ಯಾಯ ಕೊಡಿಸದಿದ್ದರೆ ನಿಮ್ಮ ತಂಗಿಗೆ ಮಗಳಿಗೆ ಅನ್ಯಾಯ ಮಾಡಿದಂತೆ ಎಂದು ಹೇಳಿದ್ದಾರೆ.

ಪಾಕಿಸ್ತಾನದ ವಿಶ್ವವಿದ್ಯಾಲಯದಲ್ಲಿ ಮಹಾಭಾರತ, ಸಂಸ್ಕೃತದ ಕೋರ್ಸ್ ಆರಂಭ!

TAGGED:Principal's indecent behavior with student: Police refuse to register complaint
Share This Article
Facebook Twitter Copy Link Print
Previous Article ಪಾಕಿಸ್ತಾನದ ವಿಶ್ವವಿದ್ಯಾಲಯದಲ್ಲಿ ಮಹಾಭಾರತ, ಸಂಸ್ಕೃತದ ಕೋರ್ಸ್ ಆರಂಭ!
Next Article New trend ಇದೇನಿದು ಟ್ರೆಂಡ್? ಮದುವೆಗೂ ಮುನ್ನವೇ ಗರ್ಭಿಣಿ ಆಗೋದಾ?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?