Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಸಾಮಾನ್ಯವಾಗಿ ಬಿಸಿಲ ನಾಡು, ಸುಡುವ ಭೂಮಿ ಅಂತಾನೇ ಕರೆಸಿಕೊಳ್ಳುವ ಉತ್ತರ ಕರ್ನಾಟಕದ ಮಂದಿ ಚಳಿಗೆ ತತ್ತರಿಸಿದ್ದಾರೆ..
ರಾಜ್ಯಾದ್ಯಂತ ಶೀತಗಾಳಿ ಬೀಸುತ್ತಿದ್ದು, ತಾಪಮಾನ ಪಾತಾಳಕ್ಕೆ ಕುಸಿದಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹಗಲೊತ್ತಿನಲ್ಲೂ ಚಳಿ ಜನರನ್ನು ಬಿಡದೆ ಕಾಡುತ್ತಿದೆ. ಮುಂದಿನ ಐದು ದಿನಗಳಲ್ಲಿ ಭಾರೀ ಚಳಿ ಬೀಳಲಿದೆ ಎಂದು ಇಲಾಖೆ ಎಚ್ಚರಿಕೆ ಕೊಟ್ಟಿದೆ..
ಮೊದಲು ಬೀದರ್ ಜಿಲ್ಲೆಗೆ ಮಾತ್ರ ನೀಡಿದ್ದ ಶೀತದ ಅಲೆ ಎಚ್ಚರಿಕೆ, ಉತ್ತರ ಕರ್ನಾಟಕದ ಪ್ರಮುಖ ಜಿಲ್ಲೆಗಳಿಗೆ ನೀಡಲಾಗಿದೆ. ಈ ಭಾಗದಲ್ಲಿ ಶೀತ ಗಾಳಿಯು ಮೇಲುಗೈ ಸಾಧಿಸಿದೆ. ಇದೇ ವಾತಾವರಣ ರಾಜ್ಯಾದ್ಯಂತ ವಿಸ್ತರಣೆ ಆಗುವ ಸಾಧ್ಯತೆಗಳು ದಟ್ಟವಾಗಿದೆ. ಅದರ ಮುನ್ಸೂಚನೆ ಎಂಬಂತೆ ಈಗಾಗಲೇ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಏರಿಳಿತ ಉಂಟಾಗಿದೆ. ಮಂಜು ಆವರಿಸಿದ್ದು, ಸ್ಪಷ್ಟ ನೀಲಿ ಆಕಾಶವಿದೆ. ಹಗಲು ಒಣ ಹವೆ, ಬೆಳಗ್ಗೆ ರಾತ್ರಿ ಮೈ ಕೊರೆವ ಚಳಿ ಆವರಿಸುತ್ತಿದೆ.
ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ, ಕಲಬುರಗಿ,ಗದಗ,ಹಾವೇರಿ, ರಾಯಚೂರು, ಕೊಪ್ಪಳ ಮತ್ತು ಯಾದಗಿರಿ ಸೇರಿದಂತೆ ಒಟ್ಟು 9 ಜಿಲ್ಲೆಗಳಲ್ಲಿ ಶೀತಗಾಳಿ ಹೆಚ್ಚಾಗಲಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ.