newsics.com
ಕೋಲಾರ: ರಾಜ್ಯದ ಹಲವೆಡೆ ಭರ್ಜರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕೆಲವು ಕಡೆಗಳಲ್ಲಿ ದೇವಸ್ಥಾನಕ್ಕೆ ಜಲದಿಗ್ಬಂಧನ ಉಂಟಾಗಿದೆ.
ಕೋಲಾರ ಜಿಲ್ಲೆಯ ಮುಳಬಾಗಲಿನ ಕೂಡುಮಲೆ ದೇವಸ್ಥಾನಕ್ಕೆ ಮಳೆ ನೀರು ನುಗ್ಗಿದ್ದು, ಕಾಣಿಕೆ ಹುಂಡಿಯಲ್ಲಿದ್ದ ಹಣ ನೀರು ಪಾಲಾಗಿದೆ.
ಭಕ್ತಾದಿಗಳು ಹುಂಡಿಗೆ ಹಾಕಿದ್ದ ಹಣ ನೀರಿನಲ್ಲಿ ನೆನೆದಿದ್ದು, ನೆನೆದಿದ್ದ ಹಣವನ್ನು ಮುಜರಾಯಿ ಇಲಾಖೆ ಸಿಬ್ಬಂದಿ ಬಿಸಿಲಲ್ಲಿ ಒಣಗಿಸಿದ್ದಾರೆ. ಇನ್ನು ದೇವಸ್ಥಾನದ ಮೇಲ್ಚಾವಣಿ ಕೆಲಸ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಮಳೆ ನೀರು ಹುಂಡಿಯಲ್ಲಿ ಬಿದ್ದು ಹಣ ಹಾಳಾಗಿದೆ. ಪ್ರತಿದಿನ ನೂರಾರು ಸಂಖ್ಯೆಯಲ್ಲಿ ಈ ದೇವಸ್ಥಾನಕ್ಕೆ ಭಕ್ತರು ಆಗಮಿಸುತ್ತಾರೆ. ಇದೀಗ ಭಕ್ತರು ಹಾಕಿದ್ದ ಕಾಣಿಕೆ ಹಣ ನೀರು ಪಾಲಾಗಿದೆ.