Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ಜಮೀನಿನಲ್ಲಿ ನೀರು ಹಾಯಿಸಲು ತೆರಳಿದ್ದ ರೈತ, ಕಾಡಾನೆ ದಾಳಿಯಿಂದ ಮೃತಪಟ್ಟ ಘಟನೆ ರಾಮನಗರದ ಹಾರೋಹಳ್ಳಿ ತಾಲೂಕಿನ ದುನ್ನಸಂದ್ರದಲ್ಲಿ ನಡೆದಿದೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ದುನ್ನಸಂದ್ರದ ರೈತ ದುಂಡಮಾದ (50) ಕಾಡಾನೆ ದಾಳಿಗೆ ಬಲಿಯಾದ ವ್ಯಕ್ತಿ. ಬೆಳಗಿನ ಜಾವ ತನ್ನ ಜಮೀನಿಗೆ ನೀರು ಹಾಯಿಸಲು ತೆರಳಿದ್ದ ರೈತನ ಮೇಲೆ ಏಕಾಏಕಿ ಕಾಡಾನೆ ದಾಳಿ ಮಾಡಿದ್ದು, ದುಂಡಮಾದ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ. ಜಮೀನಿಗೆ ತೆರಳಿದ ರೈತ ಸಾಕಷ್ಟು ಸಮಯವಾದರೂ ಮನೆಗೆ ಮರಳದೇ ಇದ್ದಾಗ ಆತಂಕಗೊಂಡ ಕುಟುಂಬಸ್ಥರು ಪರಿಶೀಲನೆ ನಡೆಸಿದಾಗ ಆತ ಮೃತಪಟ್ಟಿರುವುದು ತಿಳಿದುಬಂದಿದೆ.
ಈ ಕಾಡಾನೆ ಬನ್ನೇರುಘಟ್ಟ ಅರಣ್ಯ ಪ್ರದೇಶದಿಂದ ಬಂದಿದೆ ಎಂದು ಹೇಳಲಾಗುತ್ತಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರಿನ ಹುಣಸೂರಿನ ವಿನೋಬಾ ಗ್ರಾಮದಲ್ಲಿ ಹಸು ಮೇಲೆ ಹುಲಿ ದಾಳಿ ಮಾಡಿದೆ. ಪ್ರಭಾಕರ್ ಎಂಬುವರಿಗೆ ಸೇರಿದ ಹಸು, ವ್ಯಾಘ್ರ ದಾಳಿಗೆ ಬಲಿಯಾಗಿದೆ.
ಹುಣಸೂರಿನ ನಾಗಮಂಗಲ ಗ್ರಾಮದಲ್ಲಿಯೂ ಇಂತದ್ದೇ ಘಟನೆ ನಡೆದಿದ್ದು, ಹುಲಿ ದಾಳಿಗೆ ಹರೀಶ್ ಎಂಬುವರಿಗೆ ಸೇರಿದ ಹಸು ಬಲಿಯಾಗಿದೆ. ಜಮೀನಿನಲ್ಲಿ ಮೇಯಲು ಬಿಟ್ಟಿದ್ದ ಹಸು ಮೇಲೆ ಹುಲಿ ದಾಳಿ ಮಾಡಿದ್ದು, ಜನರ ಕೂಗಾಟದಿಂದ ಕಂಗಾಲಾದ ಹುಲಿ ಹಸುವನ್ನು ಎಳೆದುಕೊಂಡು ಕಾಡಿನತ್ತ ಓಡಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.