Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿ ಅಥವಾ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ನೌಕರರು ಸರ್ಕಾರಿ ನೌಕರರಾಗಿದ್ದರೂ ಪಿಂಚಣಿ ಪಡೆಯಲು ಅರ್ಹರಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.
ಮಾಧ್ಯಮ ಅಕಾಡೆಮಿಯ ನಿವೃತ್ತ ಸಿಬ್ಬಂದಿ ಯಲಗಯ್ಯ ಮತ್ತು ಇತರರಿಗೆ ಪಿಂಚಣಿ ಮತ್ತು ಭತ್ಯೆ ನೀಡುವಂತೆ ಆದೇಶಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಗಳನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಅನುಶಿವರಾಮನ್ ನೇತೃತ್ವದ ವಿಭಾಗೀಯ ಪೀಠದಿಂದ ಈ ಆದೇಶ ನೀಡಲಾಗಿದೆ.
ಮಾಧ್ಯಮ ಅಕಾಡೆಮಿ ಮತ್ತು ಮಂಡಳಿಯ ಸಿಬ್ಬಂದಿ ಸರ್ಕಾರಿ ಸಿಬ್ಬಂದಿಯಾಗಿದ್ದರೂ ಸಂಬಂಧಿತ ನಿಯಮಗಳ ಅಡಿಯಲ್ಲಿ ಅವರ ಸೇವೆಯನ್ನು ಪಿಂಚಣಿಗೆ ಅರ್ಹಗೊಳಿಸುವ ಯಾವುದೇ ನಿಬಂಧನೆ ಇಲ್ಲ ಎಂದು ಹೇಳಲಾಗಿದೆ.