Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ಬೆಂಗಳೂರು ಏರ್ಪೋರ್ಟ್ನ ಹೊಸ ಪಾರ್ಕಿಂಗ್ ನಿಯಮದ ವಿರುದ್ಧ ಟ್ಯಾಕ್ಸಿ ಚಾಲಕರು ಸಿಡಿದೆದ್ದಿದ್ದು, ಸಾದಹಳ್ಳಿ ಟೋಲ್ ಬಳಿ ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.
ವಿಮಾನ ನಿಲ್ದಾಣದ ಬಳಿಯ ಸಾದಹಳ್ಳಿ ಗೇಟ್ ಟೋಲ್ ಪ್ಲಾಜಾ ಬಳಿ, ಒಕ್ಕೂಟದ ಸಂಸ್ಥಾಪಕ ಮತ್ತು ರಾಜ್ಯ ಅಧ್ಯಕ್ಷ ಜಿ. ನಾರಾಯಣಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.
ಪ್ರತಿಭಟನೆಗಳಿದಿರುವ ಕ್ಯಾಬ್ ಚಾಲಕರು ರಸ್ತೆ ತಡೆ ನಡೆಸಿದ್ದು, ಈ ವೇಳೆ ಕಲ್ಲು ತೂರಾಟವೂ ನಡೆದಿದೆ ಎಂದು ತಿಳಿದುಬಂದಿದೆ.
ಹೊಸ ದಂಡ ನೀತಿ ವಿರೋಧಿಸಿ ಕನ್ನಡ ಪರ ಸಂಘಟನೆ ಮತ್ತು ಏರ್ಪೋರ್ಟ್ ಟ್ಯಾಕ್ಸಿ ಚಾಲಕರು ಸಾದಹಳ್ಳಿ ಬಳಿ ಟೋಲ್ ತಡೆದು ಆಕ್ರೋಶ ಹೊರಹಾಕಿದ್ದು, ಪ್ರತಿಭಟನೆ ಜೋರಾಗುತ್ತಿದ್ದಂತೆ ನಾರಾಯಣಸ್ವಾಮಿ ಅವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ವೇಳೆ ಮಾತಾಡಿದ ಚಾಲಕರ ಸಂಘದ ನಾರಾಯಣಸ್ವಾಮಿ ಅವರು, ಡಿಸಿಪಿ ಮಧ್ಯಸ್ತಿಕೆ ವಹಿಸಿದ್ದಾರೆ. 17 ವರ್ಷದಿಂದ ಸುದೀರ್ಘ ಸೇವೆ ಮಾಡುತ್ತಿದ್ದೇವೆ. ಸೈಡ್ ಪಿಕ್ ಅಪ್ ನಿಂದ ತೊಂದರೆ ಆಗುತ್ತಿದೆ. ನಾವು ಯಾವ ರೀತಿ ತೊಂದರೆ ಕೊಟ್ಟಿಲ್ಲ. ಇದೆಲ್ಲಾ ಬಿಐಎಎಲ್ ಅವರ ಕುತಂತ್ರ ಡಿಸಿಪಿ ಅವರು 2 ದಿನದ ಕಾಲಾವಕಾಶ ಕೇಳಿದ್ದಾರೆ. ನಾವು 4 ದಿನ ತಡೆಯುತ್ತೇವೆ. ಆಗಲೂ ಬಗ್ಗಲಿಲ್ಲ ಎಂದರೆ, ಉಪವಾಸ ಸತ್ಯಾಗ್ರಹ ಮಾಡುತ್ತೇವೆಂದು ಎಚ್ಚರಿಕೆ ನೀಡಿದ್ದಾರೆ.
ಈ ನಡುವೆ ಪರಿಸ್ಥಿತಿಯ ಸೂಕ್ಷ್ಮತೆ ಅರಿತ ಪೊಲೀಸರು ಪ್ರತಿಭಟನಾನಿರತ ಚಾಲಕರನ್ನು ಚದುರಿಸಲು ಯತ್ನಿಸಿದ್ದು, ಲಾಠಿ ಚಾರ್ಜ್ ನಡೆಸಿದ್ದಾರೆ. ಇದರ ಬೆನ್ನಲ್ಲೇ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
50 ಕೋಟಿಯತ್ತ ದಾಪುಗಾಲಿಟ್ಟ ದರ್ಶನ್ ಅಭಿನಯದ ಡೆವಿಲ್ ಸಿನಿಮಾ! 4 ದಿನಗಳಲ್ಲಿ ಗಳಿಸಿದೆಷ್ಟು?