Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಅಲಿಯಾಸ್ ಶಿವಕುಮಾರ್ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್ಗೆ ಬಂಧನ ಭೀತಿ ಎದುರಾಗಿದೆ.
ನಿರೀಕ್ಷಣಾ ಜಾಮೀನು ಕೋರಿ ಬೈರತಿ ಬಸವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ನ್ಯಾಯಪೀಠ ನೀರಿಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದೆ. ಇದರಿಂದಾಗಿ ಮಾಜಿ ಸಚಿವರಿಗೆ ಬಂಧನ ಭೀತಿ ಎದುರಾಗಿದೆ.
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್ಗೆ ಹೈಕೋರ್ಟ್ ರಿಲೀಫ್ ಜತೆಗೆ ಮತ್ತೊಂದು ಟೆನ್ಶನ್ ನೀಡಿದೆ.
ಸಿಐಡಿ ಮುಖ್ಯಸ್ಥರು ತಮ್ಮ ವಿರುದ್ಧ ಹೊರಡಿಸಿದ್ದ ಕೊಕಾ ಕಾಯ್ದೆ ಆದೇಶ ಪ್ರಶ್ನಿಸಿ ಬೈರತಿ ಬಸವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಕೋಕಾ ಕಾಯ್ದೆ ಆದೇಶ ವಜಾಗೊಳಿಸಿದೆ. ಈ ಮೂಲಕ ಬೈರತಿ ಬಸವರಾಜ್ಗೆ ರಿಲೀಫ್ ನೀಡಿದೆ.
ಆದರೆ ಬೈರತಿ ಬಸವರಾಜ್ಗೆ ಕೋರ್ಟ್ ಶಾಕ್ ನೀಡಿದೆ. ನಿರೀಕ್ಷಣಾ ಜಾಮೀನು ಕೋರಿ ಬೈರತಿ ಬಸವರಾಜ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಶುಕ್ರವಾರ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಅರ್ಜಿಯನ್ನು ವಜಾ ಮಾಡಿದೆ. ಕೊಲೆ ಪ್ರಕರಣದ ವಿಚಾರಣೆ ಬಾಕಿ ಇರುವ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೊಡಲು ಆಗಲ್ಲ ಎಂದಿರುವ ನ್ಯಾಯಪೀಠ, ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದೆ. ಹೀಗಾಗಿ ಮಾಜಿ ಸಚಿವರಿಗೆ ಇದೀಗ ಬಂಧನ ಭೀತಿ ಎದುರಾಗಿದೆ.
ಹ2025 ಜುಲೈ 15ರ ರಾತ್ರಿ ಬಿಕ್ಲು ಶಿವನನ್ನು ಹತ್ಯೆ ಮಾಡಲಾಗಿತ್ತು. ಈತನ ನಿಜವಾದ ಹೆಸರು ಶಿವಪ್ರಕಾಶ್ ಅಥವಾ ಶಿವಕುಮಾರ್, ವಯಸ್ಸು ಸುಮಾರು 40-44. ಬೆಂಗಳೂರಿನ ರೌಡಿಶೀಟರ್ ಮತ್ತು ರಿಯಲ್ ಎಸ್ಟೇಟ್ ಉದ್ಯಮಿ. ಆತನ ವಿರುದ್ಧ ಭಾರತಿನಗರ ಪೊಲೀಸ್ ಠಾಣೆಯಲ್ಲಿ 11ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು.
Minister KJ George ಸಚಿವ ಕೆಜೆ ಜಾರ್ಜ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
ಇನ್ಮುಂದೆ ಟಿಕೆಟ್ ಅನ್ನು ಮೊಬೈಲ್ ನಲ್ಲಿ ತೋರಿಸಿದ್ರೆ ಸಾಲಲ್ಲ..ಬದಲಾಗಿ ಈ ರೀತಿ ಮಾಡಬೇಕು