Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಕಳೆದ ಕೆಲ ದಿನಗಳಿಂದ ರಾಜಧಾನಿಯ ವಾತಾವರಣ ಜನರನ್ನು ಗಡ ಗಡ ನಡುಗಿಸುತ್ತಿದೆ. ಹಗಲು ಸಾಕಷ್ಟು ಬಿಸಿಲು ಮೈ ಚುರುಕ್ ಎನ್ನುವಂತೆ ಇರಲಿದೆ. ಆದರೆ ಸಂಜೆಯಾದ ಕೂಡಲೆ ಶೀತ ಗಾಳಿ ಬೀಸುತ್ತಿದ್ದು,ಯಾದಗಿರಿ, ರಾಯಚೂರು ಸೇರಿ ಹಲವೆಡೆ ಶೀತದಲೆಯ ಪರಿಣಾಮ ಹೆಚ್ಚುತ್ತಿದ್ದು, ಉತ್ತರ ಕರ್ನಾಟಕ ಚಳಿಗಾಳಿಯಿಂದ ತತ್ತರಿಸುತ್ತಿದೆ.
ರಾಜ್ಯದಲ್ಲಿ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ, ಬಾಗಲಕೋಟೆ ಬೆಳಗಾವಿ ಜಿಲ್ಲೆಗಳಲ್ಲಿ ತೀವ್ರ ಚಳಿಗಾಳಿ ಬೀಸುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ಹಾವೇರಿ, ಬಳ್ಳಾರಿ, ಗದಗ, ಧಾರವಾಡ ಹಾಗೂ ಕೊಪ್ಪಳ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಸೂಚಿಸಿದೆ.
ಇನ್ನು ವೈದ್ಯರು ಆರೋಗ್ಯ ಕಾಪಾಡಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಸಮತೋಲನ ಆಹಾರ ಸೇವನೆಯೊಂದಿಗೆ ಬೆಚ್ಚನೆಯ ಉಡುಪು ಧರಿಸುವಂತೆ ಇಲಾಖೆ ಮತ್ತು ವೈದ್ಯರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.