Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಆನೇಕಲ್: 20ಕ್ಕೂ ಹೆಚ್ಚು ವಾಹನಗಳಿಗೆ ಕಂಟೈನರ್ ಡಿಕ್ಕಿಯಾಗಿದ್ದು, 2ಕ್ಕೂ ಹೆಚ್ಚು ಸಾವಾಗಿರುವ ಘಟನೆ ಬೆಂಗಳೂರಿನ ಹೊರವಲಯದಲ್ಲಿ ನಡೆದಿದೆ.
ಇನ್ನು ಹಲವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ. ವಾಹನ ಡಿಕ್ಕಿಯಾದರೂ ನಿಲ್ಲಿಸದೆ ತೆರಳಿದ ಚಾಲಕನನ್ನ ಪೊಲೀಸರು 14 ಕಿಲೋಮೀಟರ್ ಚೇಸ್ ಮಾಡಿದ್ದಾರೆ. ಬಳಿಕ ಸ್ಥಳೀಯರು ಕಲ್ಲೆಸೆದು ವಾಹನ ನಿಲ್ಲಿಸಿದ್ದಾರೆ.
ಸರಣಿ ಅಪಘಾತ ನಡೆಸಿ ಅತೀ ವೇಗವವಾಗಿ ಸಾಗುತ್ತಿದ್ದ ಕಂಟೈನರ್ನ್ನು ಪೊಲೀಸರು ಚೇಸ್ ಮಾಡಿದ್ದಾರೆ. ಆದರೆ ಚಾಲಕನ ಮಾತ್ರ ನಿಲ್ಲಿಸಲೇ ಇಲ್ಲ. ಹೊಸೂರು ಹೆದ್ದಾರಿ ಚಂದಾಪುರದಲ್ಲಿ ಸಾರ್ವಜನಿಕರು ಕಲ್ಲುಗಳನ್ನ ತೂರಿದ್ದಾರೆ. ಸತತವಾಗಿ ಕಲ್ಲು ತೂರಿದ ಕಾರಣ ಚಾಲಕ ಗಾಯಗೊಂಡಿದ್ದಾನೆ. ಹೀಗಾಗಿ ವಾಹನ ನಿಲ್ಲಿಸಿದ್ದಾನೆ.
ಅನೇಕಲ್ ಪಟ್ಟಣ ಸಮೀಪದ ಬೆಸ್ತಮಾನಹಳ್ಳಿಯಿಂದ ಚಂದಾಪುರದವರೆಗೆ ಅಪಘಾತ ನಡೆದಿದೆ. ಕಂಟೈನರ್ ಚಾಲಕ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ, ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ ಹೊಡೆದು ವೇಗವಾಗಿ ಸಾಗಿದ್ದಾನೆ. ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಇನ್ನು ಐದಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.ಸ್ಥಳೀಯ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಅದೃಷ್ಠವಶಾತ್ ಹೆಚ್ಚಿನ ವಾಹನಗಳು ಪಾರ್ಕ್ ಮಾಡಿದ್ದ ವಾಹನಗಳಾಗಿತ್ತು. ಈ ವಾಹನಗಳಲ್ಲಿ ಯಾರೂ ಇರದ ಕಾರಣ ಸಾವಿನ ನೋವಿನ ಸಂಖ್ಯೆ ತಗ್ಗಿದೆ. ಈ ರೀತಿ ಅಪಘಾತಕ್ಕೆ ಕಾರಣವೇನು ಅನ್ನೋದು ತಿಳಿದುಬಂದಿಲ್ಲ.
ಭಾರತದ ಟಾಪ್ 10 ನಾಯಕಿಯರ ಪಟ್ಟಿಯಲ್ಲಿ ರಶ್ಮಿಕಾ ಮಂದಣ್ಣರನ್ನೇ ಬೀಟ್ ಮಾಡಿದ ಆ ಸೌಥ್ ನಟಿ ಯಾರು?