Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಾಮರಾಜನಗರದಲ್ಲಿ 5 ಹುಲಿಗಳು ಪ್ರತ್ಯಕ್ಷ: ಜನರಿಗೆ ಹೊರಬರದಂತೆ ಸೂಚನೆ
ಕರ್ನಾಟಕಪ್ರಮುಖ

ಚಾಮರಾಜನಗರದಲ್ಲಿ 5 ಹುಲಿಗಳು ಪ್ರತ್ಯಕ್ಷ: ಜನರಿಗೆ ಹೊರಬರದಂತೆ ಸೂಚನೆ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬರೋಬ್ಬರಿ ಐದು ಹುಲಿಗಳು ಒಟ್ಟಿಗೆ ಪ್ರತ್ಯಕ್ಷವಾಗಿರುವ ಘಟನೆ ಚಾಮರಾಜನಗರದ ನಂಜೆದೇವಪುರ ಗ್ರಾಮದ ಬಳಿ ನಡೆದಿದೆ.

ಸದ್ಯ ಜನರ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ನಂಜೆದೇವಪುರ ಸೇರಿ ಮೂರು ಗ್ರಾಮಗಳಲ್ಲಿ ಇಂದಿನಿಂದ ನಾಳೆ ಸಂಜೆ 6ರವರೆಗೂ 144 ಸೆಕ್ಷನ್ ಜಾರಿ ಮಾಡಿ ಚಾಮರಾಜನಗರ ತಹಶೀಲ್ದಾರ್ ಗಿರಿಜಾ ಆದೇಶ ಹೊರಡಿಸಿದ್ದಾರೆ.

ನಿಷೇಧಾಜ್ಞೆ ಜಾರಿ
ಈಗಾಗಲೇ 5 ಹುಲಿಗಳಿರುವ ಜಾಗದ ಲೊಕೇಷನ್ ಅನ್ನು ಅರಣ್ಯ ಸಿಬ್ಬಂದಿ ಟ್ರ್ಯಾಕ್ ಮಾಡಿದ್ದಾರೆ. ಆದರೆ ಚಾಮರಾಜನಗರ ಜಿಲ್ಲೆಯಲ್ಲಿ ಇರುವುದು ಕೇವಲ ಇಬ್ಬರೇ ಪಶು ವೈದ್ಯರು ಮಾತ್ರ. ಹೀಗಾಗಿ ಹುಲಿಗಳನ್ನು ಸೆರೆ ಹಿಡಿಯಲು ಕಷ್ಟಸಾಧ್ಯ ಎನ್ನುತ್ತಿದ್ದಾರೆ ಅರಣ್ಯ ಸಿಬ್ಬಂದಿ. ಸದ್ಯ ಹುಲಿಗಳ ಸೆರೆ ಕಾರ್ಯಾಚರಣೆ ಹಿನ್ನೆಲೆ ನಂಜೆದೇವನಪುರ, ವೀರನಪುರ, ಉಡಿಗಾಲ ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಆ ಮೂಲಕ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದ್ದು, ಯಾರೂ ಗುಂಪು ಸೇರಬಾರದು, ಮನೆಯಿಂದ ಹೊರಬರದಂತೆ ತಿಳಿಸಲಾಗಿದ್ದು, ಮೂರು ಗ್ರಾಮಗಳ ಜನರು ಸಹಕರಿಸುವಂತೆ ತಹಶೀಲ್ದಾರ್ ಗಿರಿಜಾ ಮನವಿ ಮಾಡಿದ್ದಾರೆ.
ಸ್ಥಳದಲ್ಲೇ ಬೀಡುಬಿಟ್ಟ ಶಾಸಕ ಪುಟ್ಟರಂಗಶೆಟ್ಟಿ
ಇನ್ನು ಸ್ಥಳೀಯ ಶಾಸಕ ಪುಟ್ಟರಂಗಶೆಟ್ಟಿ ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಶಾಸಕ ಪುಟ್ಟರಂಗಶೆಟ್ಟಿಗೆ ಅಭಯ ನೀಡಿದ್ದು, ಹೆಚ್ಚಿನ ಆನೆ ಹಾಗೂ ನುರಿತ ಪಶು ವೈದ್ಯರನ್ನ ಕಳಿಸುವ ಆಶ್ವಾಸನೆ ನೀಡಿದ್ದಾರೆ. ನುರಿತ ಪಶು ವೈದ್ಯರ ಕೊರತೆ ಇರುವುದನ್ನು ಶಾಸಕ ಪುಟ್ಟರಂಗಶೆಟ್ಟಿ ಒಪ್ಪಿಕೊಂಡಿದ್ದಾರೆ.
ಸದ್ಯ ಶಾಸಕ ಪುಟ್ಟರಂಗಶೆಟ್ಟಿ ಖುದ್ದು ಅರಣ್ಯ ಸಿಬ್ಬಂದಿಯ ಜೊತೆ ಪರಿಶೀಲನೆ ಕಾರ್ಯ ನಡೆಸಿದ್ದಾರೆ. ಅರಣ್ಯ ಸಿಬ್ಬಂದಿಯ ಜೊತೆ ಪರಿಶೀಲನೆ ವೇಳೆ ಡ್ರೋನ್ ಕ್ಯಾಮೆರಾದಲ್ಲಿ ಕಲ್ಲು ಕ್ವಾರಿಯ ಜಾಗದಲ್ಲಿ ತಾಯಿ ಹುಲಿ ಹಾಗೂ ಮರಿಹುಲಿಗಳ ಪಗ್ ಮಾರ್ಕ್ ಪತ್ತೆ ಆಗಿದೆ. ಇದೇ ಕಲ್ಲು ಕ್ವಾರಿಯಲ್ಲಿ 5 ಹುಲಿಗಳು ಬೀಡು ಬಿಟ್ಟಿವೆ.
ಕೂಂಬಿಂಗ್ಗೆ ಚಾಲನೆ
ಇನ್ನು ದುಬಾರೆ ಆನೆ ಶಿಬಿರದಿಂದ ಈಗಾಗಲೇ ಈಶ್ವರ ಹಾಗೂ ಲಕ್ಷ್ಮಣ ಆನೆಗಳು ಸ್ಥಳಕ್ಕೆ ಆಗಮಿಸಿದ್ದು, ಕೂಂಬಿಂಗ್ ಕಾರ್ಯಚರಣೆಗೆ ಚಾಲನೆ ನೀಡಲಾಗಿದೆ. ನಂಜೆದೇವಪುರ ಗ್ರಾಮಸ್ಥರು ಗಜಪಡೆಗೆ ಪೂಜೆ ಮಾಡಿ ಸ್ವಾಗತಿಸಿದರು. ಈಶ್ವರನ ಮಾವುತರಾಗಿ ವಿಶ್ವನಾಥ್ ಹಾಗೂ ಮಂಜುನಾಥ್, ಲಕ್ಷ್ಮಣನ ಮಾವುತರಾಗಿ ಸಂಜು ಹಾಗೂ ಸುರೇಶ ಆಗಮಿಸಿದ್ದಾರೆ. ಲಕ್ಷ್ಮಣನಿಗೆ 45 ವರ್ಷಗಳಾಗಿದ್ದು, 50ಕ್ಕೂ ಹೆಚ್ಚು ಕೂಂಬಿಂಗ್ನಲ್ಲಿ ಭಾಗಿಯಾಗಿದ್ದಾನೆ.

https://tv9kannada.com/karnataka/chamarajanagar/chamarajanagar-five-tigers-sighted-section-144-imposed-for-capture-operations-1125942.html

TAGGED:5 tigers sighted in Chamarajanagar: People advised not to venture out
Share This Article
Facebook Twitter Copy Link Print
Previous Article ಸಮುದ್ರದೊಳಗೆ ಭರತನಾಟ್ಯ ಮಾಡಿದ 14 ವರ್ಷದ ಬಾಲಕಿ; ವೈರಲ್ ವಿಡಿಯೋ ನೋಡಿ
Next Article ವಿದ್ಯಾರ್ಥಿನಿಯನ್ನು ಚಲಿಸುತ್ತಿದ್ದ ರೈಲಿನಿಂದ ತಳ್ಳಿದ ವ್ಯಕ್ತಿ

Popular Posts

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

You Might Also Like

ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?