Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಮೈಸೂರು: ಮೈಸೂರು ನಗರದ ಅರಮನೆ ಮುಂಭಾಗ ಗುರುವಾರ ಸಂಜೆ ಭೀಕರ ಸ್ಪೋಟ ಸಂಭವಿಸಿದ್ದು, ಒಬ್ಬರು ಮೃತಪಟ್ಟಿದ್ದು, ನಾಲ್ಕು ಮಂದಿಗೆ ಗಂಭೀರ ಗಾಯಗಳಾಗಿವೆ.ಅರಮನೆಯ ಮುಂಭಾಗದ ಜಯಚಾಮರಾಜೇಂದ್ರ ಗೇಟ್ನ ಬಳಿ ಈ ಘಟನೆಯಾಗಿದೆ. ಸಮೀಪದಲ್ಲಿ ಹೀಲಿಯಂ ಬಲೂನು ಮಾರಾಟ ಮಾಡುತ್ತಿದ್ದು, ಅದರ ಸಿಲಿಂಡರ್ ಸ್ಪೋಟಗೊಂಡಿದೆ.
ಘಟನೆ ಸಂಬಂಧ ಇದೀಗ ಮೈಸೂರು ಪೊಲೀಸರು ಎಫ್ಐಆರ್ ದಾಖಲಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಹೀಲಿಯಂ ಸಿಲಿಂಡರ್ ಸ್ಫೋಟಕ್ಕೆ ಅಸಲಿ ಕಾರಣ ಏನು? ಇಲ್ಲಿದೆ ಮಾಹಿತಿ.
ಸಲೀಂ ಸತತವಾಗಿ ಬಲೂನ್ಗಳಿಗೆ ಹೀಲಿಯಂ ಗ್ಯಾಸ್ ತುಂಬುತ್ತಿದ್ದ. ಅಲ್ಲದೆ, ಸಿಲಿಂಡರ್ ಅನ್ನು ವೇಗವಾಗಿ ಆನ್–ಆಫ್ ಮಾಡಿದ್ದರಿಂದ ಒಳಭಾಗದಲ್ಲಿ ಹೀಟ್ ಉಂಟಾಗಿ ಒತ್ತಡ ಹೆಚ್ಚಾಗಿತ್ತು. ಇದರ ಪರಿಣಾಮ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಮೈಸೂರು ಪೊಲೀಸ್ ಮೂಲಗಳು ತಿಳಿಸಿವೆ.
ಸಾರ್ವಜನಿಕರು ಬಲೂನ್ ಖರೀದಿಗೆ ಸೇರಿದ್ದರಿಂದ ಸಲೀಂ ನಿರಂತರವಾಗಿ ಗ್ಯಾಸ್ ತುಂಬುತ್ತಿದ್ದ. ಈ ವೇಳೆ ಸಿಲಿಂಡರ್ ಅನ್ನು ವೇಗವಾಗಿ ಮತ್ತೆ ಮತ್ತೆ ಆನ್–ಆಫ್ ಮಾಡಿದ್ದರಿಂದ ಒಳಭಾಗದಲ್ಲಿ ತಾಪಮಾನ ಹೆಚ್ಚಾಗಿ ಒತ್ತಡ ಉಂಟಾಗಿದೆ. ಇದರಿಂದ ಏಕಾಏಕಿ ಸಿಲಿಂಡರ್ ಸ್ಪೋಟಗೊಂಡು ಸಲೀಂ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸಲೀಂ ಪಕ್ಕದಲ್ಲೇ ನಿಂತಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳಲ್ಲಿ ಒಬ್ಬರಿಗೆ ಮೈಸೂರಿನ ಜೆ.ಎಸ್.ಎಸ್ ಆಸ್ಪತ್ರೆಯಲ್ಲಿ, ಮೂವರಿಗೆ ಕೆ.ಆರ್ ಆಸ್ಪತ್ರೆಗೆ ಚಿಕಿತ್ಸೆ ನೀಡಲಾಗುತ್ತಿದೆ.