Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಂಭವಿಸಿದ ಅಪಘಾತದಲ್ಲಿ 9 ಮಂದಿ ಸಜೀವ ದಹನವಾಗಿದ್ದಾರೆ. ಈ ದುರಂತದಲ್ಲಿ ಭಟ್ಕಳ ಮೂಲದ, ಬೆಂಗಳೂರಿನ ಡೆಲಾಯ್ಟ್ ಕಂಪನಿ ಉದ್ಯೋಗಿ ರಶ್ಮಿ ಮಹಾಲೆ ಅವರು ಗುರುತು ಸಿಗದಷ್ಟು ಸುಟ್ಟು ಕರಕಲಾಗಿ ದುರಂತ ಸಾವನ್ನಪ್ಪಿದ್ದಾರೆ.
ಕನಸು ಕಟ್ಟಿಕೊಂಡು ಬೆಂಗಳೂರಿಗೆ ಬಂದಿದ್ದಾಕೆ. ಆದರೆ, ಕನಸು ಮನಸಲ್ಲೂ ತನ್ನ ಸಾವು ರಸ್ತೆಯಲ್ಲಿ ಈ ರೀತಿಯಲ್ಲಿ ಆಗುತ್ತದೆ ಎಂದು ಊಹಿಸಿಯೇ ಇದ್ದಿರಲಿಲ್ಲ. ಭಟ್ಕಳದಂಥ ಪುಟ್ಟ ಪಟ್ಟಣದಲ್ಲಿಯೇ ಬೆಳೆದು ತನ್ನೆಲ್ಲಾ ವಿದ್ಯಾಭ್ಯಾಸವನ್ನು ಭಟ್ಕಳದಲ್ಲಿಯೇ ಮಾಡಿದ್ದ ರಶ್ಮಿ ಮಹಾಲೆ,ಗೆಳೆತಿಯಾರಾದ ಗಗನಾ ಹಾಗೂ ರಕ್ಷಿತಾ ಜೊತೆ ಗೋಕರ್ಣಕ್ಕೆ ಹೋಗುವ ಖುಷಿಯಲ್ಲಿದ್ದರು.ಆದರೆ ವಿಧಿಯಾಟ ಬೇರೆಯೇ ಇತ್ತು.
10ನೇ ತರಗತಿಯವರಗೆ ಭಟ್ಕಳದ ಆನಂದ ಆಶ್ರಮ ಕಾನ್ವೆಂಟ್ನಲ್ಲಿ ವಿದ್ಯಾಭ್ಯಾಸ ಮಾಡಿದ್ದ ರಶ್ಮಿ, ಪಿಯುಸಿಯ ದಿನಗಳನ್ನು ಸಿದ್ಧಾರ್ಥ ಪ್ರೀ ಯುನಿವರ್ಸಿಟಿ ಕಾಲೇಜಿನಲ್ಲಿ ಮಾಡಿದ್ದರು. ಕಾಮರ್ಸ್ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡಿದ್ದ ರಶ್ಮಿ ನಂತರ ತಮ್ಮ ಬಿಕಾಮ್ ಪದವಿಯನ್ನು ಶ್ರೀ ಗುರು ಸುಧೀಂಧ್ರ ಡಿಗ್ರಿ ಕಾಲೇಜಿನಲ್ಲಿ ಮಾಡಿದ್ದರು. 2020 ರಿಂದ 2023ರಲ್ಲಿ ವಿದ್ಯಾಭ್ಯಾಸ ಮಾಡಿದ್ದ ರಶ್ಮಿ, ಕೊನೆಯ ವರ್ಷದ ಪದವಿಯಲ್ಲಿದ್ದಾಗಲೇ ಟಿಸಿಎಸ್ ಕಂಪನಿಯಲ್ಲಿ ಪರೀಕ್ಷೆ ಬರೆದು ಕೆಲಸ ಗಿಟ್ಟಿಸಿಕೊಂಡಿದ್ದರು.
ಒಂದು ವರ್ಷ 8 ತಿಂಗಳ ಕಾಲ ಟಿಎಸ್ನಲ್ಲಿ ಬ್ಯುಸಿನೆಸ್ ಪ್ರೊಸೆಸ್ ಅಸೋಸಿಯೇಟ್ ಆಗಿ ಕೆಲಸ ಮಾಡಿದ್ದ ರಶ್ಮಿ ಮಹಾಲೆ ಏಳು ತಿಂಗಳ ಹಿಂದೆಯಷ್ಟೇ ಡೆಲಾಯ್ಟ್ ಕಂಪನಿಯಲ್ಲಿ ಎಎಂಎಲ್ ಅನಾಲಿಸ್ಟ್ ಆಗಿ ಕೆಲಸಕ್ಕೆ ಸೇರಿದ್ದರು. ಹೈಬ್ರಿಡ್ ಮಾದರಿಯಲ್ಲಿ ಅವರು ಕೆಲಸ ಸಾಗುತ್ತಿತ್ತು. ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ, ನೆಮ್ಮದಿಯ ಜೀವನ ನೋಡಿಕೊಂಡು ಬೆಳೆದಿದ್ದ ರಶ್ಮಿ ಹೊಸ ವರ್ಷದ ಸಂಭ್ರಮವನ್ನು ಸ್ನೇಹಿತರ ಜೊತೆಯಲ್ಲಿ ಆಚರಿಸುವಾಗಲೇ ದುರಂತ ಸಾವು ಕಂಡಿದ್ದಾರೆ.
https://www.newsics.com/2025/12/26/mark-how-much-did-the-movie-45-earn-on-its-first-day/