Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಗಿಲ್ಲಿ ನಟ ಮತ್ತು ಕಾವ್ಯಾ ಶೈವ ಅವರು ಆತ್ಮೀಯರಾಗಿದ್ದಾರೆ. ಶೋ ಆರಂಭದಿಂದಲೂ ಕೂಡ ಅವರು ಒಟ್ಟಿಗೆ ಇದ್ದಾರೆ.ಈ ಸೀಸನ್ ಆರಂಭ ಆದಾಗಿನಿಂದ ಗಿಲ್ಲಿ ನಟ ಮತ್ತು ಕಾವ್ಯ ಶೈವ ಅವರು ಜೊತೆಯಾಗಿಯೇ ಇದ್ದಾರೆ. ಅವರಿಬ್ಬರ ನಡುವೆ ಜಗಳ ಬಂದಿದ್ದು ಕಡಿಮೆ. ಇದೇ ಕಾರಣಕ್ಕೆ ಅವರಿಬ್ಬರನ್ನು ಕೆಲವರು ಟೀಕೆ ಮಾಡಿದ್ದು ಕೂಡ ಇದೆ.
ಇದೀಗಗಿಲ್ಲಿ ನಟ ಅವರು ಈಗ ನೇರವಾಗಿ ಮದುವೆ ಬಗ್ಗೆ ಮನಸ್ಸು ಬಿಚ್ಚಿ ಮಾತಾಡಿದ್ದಾರೆ. ಕಾವ್ಯಾ ಪೋಷಕರು ಬಿಗ್ ಬಾಸ್ ಮನೆಗೆ ಬಂದಾಗ ಮದುವೆ ಬಗ್ಗೆ ಮಾತನಾಡಬೇಕು ಎಂದು ಗಿಲ್ಲಿ ಪ್ಲ್ಯಾನ್ ಮಾಡಿದ್ದಾರೆ. ಡಿಸೆಂಬರ್ 25ರ ಸಂಚಿಕೆಯಲ್ಲಿ ಈ ಪ್ಲ್ಯಾನ್ ಆಗಿದೆ. ಆ ಮಾತು ಕೇಳಿಸಿಕೊಂಡು ಕಾವ್ಯಾ ಅವರು ಪ್ರತಿಕ್ರಿಯಿಸಿದ್ದಾರೆ.
ಗಿಲ್ಲಿ ಯಾವ ಥರದ ಹುಡುಗ ಅಂತ ಕೇಳಿ. ಕಾವ್ಯಾಗೆ ಮದುವೆ ಮಾಡಬೇಕು ಅಂತ ಇದ್ದೀರಂತೆ ಹೌದಾ ಎಂಬಿತ್ಯಾದಿ ಪ್ರಶ್ನೆಗಳನ್ನು ಕಾವ್ಯಾ ಅವರ ಪೋಷಕರಿಗೆ ಬೇರೆಯವರೆಲ್ಲ ಕೇಳಬೇಕು’ ಎಂದು ಗಿಲ್ಲಿ ಹೇಳಿದ್ದಾರೆ. ‘ನಾಳೆ ನಿಶ್ಚಿತಾರ್ಥಕ್ಕೆ ಯಾರು ಬರುತ್ತಾರೋ ಏನೋ.. ಮದುವೆ ಮಾತುಕಥೆಗೆ ಯಾರು ಬರುತ್ತಾರೋ’ ಎಂದು ಗಿಲ್ಲಿ ಕಾವ್ಯನ ರೇಗಿಸಿದರು. ‘ರಾಖಿ ತೆಗೆದುಕೊಂಡು ಬರಬಹುದು. ರಕ್ಷಾ ಬಂಧನ ಆಗಬಹುದು’ ಎಂದು ಕಾವ್ಯಾ ಅವರು ತಿರುಗೇಟು ನೀಡಿದರು. ಅವರಿಬ್ಬರ ನಡುವಿನ ಸಂಭಾಷಣೆ ಫನ್ನಿ ಆಗಿತ್ತು.