Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಕಾರವಾರ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ (ಡಿಸೆಂಬರ್ 28) ಕಾರವಾರದ ಏಷ್ಯಾ ಅತಿದೊಡ್ಡ ನೌಕಾನೆಲೆ ‘ಸೀಬರ್ಡ್’ಗೆ ಭೇಟಿ ನೀಡಲಿದ್ದಾರೆ.
ರಾಷ್ಟ್ರಪತಿಗಳ ಆಗಮನ ಹಿನ್ನೆಲೆಯಲ್ಲಿ ನೌಕಾನೆಲೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ನೌಕಾಪಡೆ ಸಕಲ ಸಿದ್ಧತೆ ನಡೆಸಿದೆ.
ರಾಷ್ಟ್ರಪತಿಗಳು ಶನಿವಾರ ಗೋವಾದಲ್ಲಿ ತಂಗಲಿದ್ದು, ಭಾನುವಾರ (ಡಿ.28) ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ಕಾರವಾರಕ್ಕೆ ಆಗಮಿಸಲಿದ್ದಾರೆ. ಅಂದು ಬೆಳಗ್ಗೆ 10 ಗಂಟೆಗೆ ಅವರು ಐಎನ್ಎಸ್ ವಿಕ್ರಾಂತ್ ಯುದ್ಧನೌಕೆಗೆ ಭೇಟಿ ನೀಡಲಿದ್ದಾರೆ. ಬಳಿಕ ಸಬ್ಮರೀನ್ಗೆ (ಜಲಂತರ್ಗಾಮಿ) ಭೇಟಿ ನೀಡಿ, ಸಮುದ್ರದ ಆಳದಲ್ಲಿ ಸ್ವಲ್ಪ ಕಾಲ ಪ್ರಯಾಣ ಬೆಳೆಸುವ ಮೂಲಕ ನೌಕಾಪಡೆಯ ಕಾರ್ಯಕ್ಷಮತೆಯನ್ನು ವೀಕ್ಷಿಸಲಿದ್ದಾರೆ.
ರಾಷ್ಟ್ರಪತಿಗಳ ಭೇಟಿ ಮತ್ತು ಭದ್ರತೆಯ ದೃಷ್ಟಿಯಿಂದ ಡಿ.28ರಂದು ಕಾರವಾರ- ಅಂಕೋಲಾ ವ್ಯಾಪ್ತಿಯಲ್ಲಿ ಮೀನುಗಾರಿಕೆಗೆ ನಿರ್ಬಂಧ ಹೇರಲಾಗಿದೆ. ಅಂದು ಬೆಳಗ್ಗೆಯಿಂದ ಮಧ್ಯಾಹ್ನ 3.30ರವರೆಗೆ ಮಾಜಾಳಿಯಿಂದ ಹಾರಾವಾಡದವರೆಗೆ ಯಾವುದೇ ಮೀನುಗಾರಿಕಾ ಬೋಟ್ಗಳು ಸಮುದ್ರಕ್ಕೆ ಇಳಿಯದಂತೆ ಮೀನುಗಾರಿಕಾ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಸಿಜೆರಿಯನ್ ವೇಳೆ ಶಿಶುವಿನ ತಲೆ ಕೊಯ್ದ ಡಾಕ್ಟರ್! ಜಿಲ್ಲಾಸ್ಪತ್ರೆ ವಿರುದ್ಧ ಆಕ್ರೋಶ
stray dog adopt ಬೆಂಗಳೂರಿನ ಬೀದಿನಾಯಿ ಬೇಕಾ? ದತ್ತು ಪಡೆಯಲು ಇಲ್ಲಿದೆ ಅವಕಾಶ
Height Family ಈ ಕುಲಕರ್ಣಿ ಕುಟುಂಬಕ್ಕೆ ಭಾರತದ ಅತಿ ಎತ್ತರದ ಫ್ಯಾಮಿಲಿ ಖ್ಯಾತಿ!