Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಕಾಂಬೋಡಿಯಾ: ಥೈಲ್ಯಾಂಡ್ ಮತ್ತು ಕಾಂಬೋಡಿಯಾ ನಡುವಿನ ಗಡಿ ವಿವಾದದಿಂದ ಪ್ರಭಾವಿತವಾಗಿರುವ ಪ್ರದೇಶದಲ್ಲಿ ಥಾಯ್ ಸೇನೆಯು ಕಾಂಬೋಡಿಯಾ ಗಡಿಯಲ್ಲಿ 9 ಮೀಟರ್ ಎತ್ತರದ ವಿಷ್ಣು ವಿಷ್ಣುವಿನ ಪ್ರತಿಮೆಯನ್ನು ದ್ವಂಸ ಮಾಡಿದೆ.
ಕಾಂಬೋಡಿಯಾದಲ್ಲಿ ಹಿಂದೂ ನಂಬಿಕೆಯ ಮೇಲೆ ದಾಳಿ ನಡೆದಿದೆ. ಇದು ಪ್ರಪಂಚದಾದ್ಯಂತ ಹಿಂದೂಗಳ ಕೋಪವನ್ನು ಕೆರಳಿಸುತ್ತಿದೆ. ಈ ದಾಳಿಯ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ.
ಈ ಬಗ್ಗೆ ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಇಂತಹ ಕೃತ್ಯಗಳು ಪ್ರಪಂಚದಾದ್ಯಂತದ ಭಕ್ತರ ಭಾವನೆಗಳಿಗೆ ನೋವುಂಟು ಮಾಡುತ್ತವೆ ಎಂದು ಹೇಳಿದ್ದಾರೆ. ಇಂತಹ ದಾಳಿಗಳು ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಗೆ ಗಂಭೀರ ಹಾನಿಯನ್ನುಂಟುಮಾಡುತ್ತವೆ ಎಂದು ಅವರು ಹೇಳಿದ್ದಾರೆ. ಎರಡೂ ದೇಶಗಳು ಮಾತುಕತೆಯ ಮೂಲಕ ಶಾಂತಿಯತ್ತ ಹೆಜ್ಜೆ ಹಾಕಬೇಕೆಂದು ಅವರು ಒತ್ತಾಯಿಸಿದ್ದಾರೆ. ಡಿಸೆಂಬರ್ 7ರಂದು ಥೈಲ್ಯಾಂಡ್-ಕಾಂಬೋಡಿಯಾ ಗಡಿ ವಿವಾದ ಪುನರಾರಂಭವಾಯಿತು.