Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬಾಂಗ್ಲಾದೇಶದ ರಾಜಕೀಯ ಕಾರ್ಯಕರ್ತ ಉಸ್ಮಾನ್ ಹಾದಿ ಹತ್ಯೆಯ ನಂತರ ಇಬ್ಬರು ಪ್ರಮುಖ ಶಂಕಿತ ಆರೋಪಿಗಳು ಮೇಘಾಲಯ ಗಡಿಯ ಮೂಲಕ ಭಾರತಕ್ಕೆ ಪಲಾಯನಗೈದಿರುವುದಾಗಿ ಢಾಕಾ ಮೆಟ್ರೋಪಾಲಿಟನ್ ಪೊಲೀಸರು ತಿಳಿಸಿರುವುದಾಗಿ ದಿ ಡೈಲಿ ಸ್ಟಾರ್ ವರದಿ ಮಾಡಿದೆ.
ಡಿಎಂಪಿ ಮಾಧ್ಯಮ ಕೇಂದ್ರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಹೆಚ್ಚುವರಿ ಆಯುಕ್ತ ಎಸ್.ಎನ್. ನಜ್ರುಲ್ ಇಸ್ಲಾಂ, ಶಂಕಿತರಾದ ಫೈಸಲ್ ಕರೀಮ್ ಮಸೂದ್ ಮತ್ತು ಅಲಂಗೀರ್ ಶೇಖ್, ಸ್ಥಳೀಯ ಸಹಚರರ ಸಹಾಯದಿಂದ ಮೈಮೆನ್ಸಿಂಗ್ನ ಹಲುಘಾಟ್ ಗಡಿಯ ಮೂಲಕ ಭಾರತವನ್ನು ಪ್ರವೇಶಿಸಿದ್ದಾರೆ ಎಂದು ತಿಳಿಸಿದ್ದಾರೆ.
“ನಮಗೆ ದೊರೆತ ಮಾಹಿತಿಯ ಪ್ರಕಾರ, ಶಂಕಿತರು ಹಲುಘಾಟ್ ಗಡಿಯ ಮೂಲಕ ಭಾರತವನ್ನು ಪ್ರವೇಶಿಸಿದ್ದಾರೆ. ಗಡಿ ದಾಟಿದ ನಂತರ, ಇಬ್ಬರನ್ನೂ ಮೊದಲು ಪೂರ್ಣಿ ಎಂಬ ವ್ಯಕ್ತಿ ಬರಮಾಡಿಕೊಂಡಿದ್ದ. ನಂತರ, ಸಾಮಿ ಎಂಬ ಟ್ಯಾಕ್ಸಿ ಚಾಲಕ ಅವರನ್ನು ಮೇಘಾಲಯದ ತುರಾ ನಗರಕ್ಕೆ ಕರೆದೊಯ್ದಿರುವುದಾಗಿ ನಜ್ರುಲ್ ಇಸ್ಲಾಂ ಮಾಹಿತಿ ನೀಡಿರುವುದಾಗಿ ದಿ ಡೈಲಿ ಸ್ಟಾರ್ ಉಲ್ಲೇಖಿಸಿದೆ.
ಶಂಕಿತರಿಗೆ ಸಹಾಯ ಮಾಡಿದ ಇಬ್ಬರು ವ್ಯಕ್ತಿಗಳನ್ನು ಭಾರತೀಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂಬ ಅನೌಪಚಾರಿಕ ವರದಿಗಳು ಪೊಲೀಸರಿಗೆ ಬಂದಿವೆ ಎಂದು ಅವರು ಹೇಳಿದರು.
ಶಂಕಿತ ಇಬ್ಬರು ವ್ಯಕ್ತಿಗಳ ಬಂಧನ ಮತ್ತು ಗಡಿಪಾರು ಕುರಿತು ಖಚಿತಪಡಿಸಿಕೊಳ್ಳಲು ನಾವು ಭಾರತದ ಅಧಿಕಾರಿಗಳ ಜತೆ ಸಂಪರ್ಕದಲ್ಲಿರುವುದಾಗಿ ಇಸ್ಲಾಂ ತಿಳಿಸಿದ್ದಾರೆ.
ಗವಿಮಠದ ಜಾತ್ರೆಯಲ್ಲಿ ದಾಸೋಹದ ವ್ಯವಸ್ಥೆ ಹೇಗಿರುತ್ತೆ?; ಈ ಬಾರಿ ಭಕ್ತರಿಗೆ ಏನು ಸ್ಪೆಷಲ್ ಇರುತ್ತೆ?