newsics.com
ಭಾರೀ ಮಳೆಯಿಂದ ಉಂಟಾದ ಭೂಕುಸಿತದಿಂದ ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 344ಕ್ಕೆಏರಿದೆ. ಇನ್ನೂ 200ಕ್ಕೂ ಹೆಚ್ಚು ಮಂದಿ ಪತ್ತೆಯಾಗಬೇಕಿದ್ದು ಇದರಲ್ಲಿ 29 ಮಕ್ಕಳೂ ಸೇರಿದ್ದಾರೆ ಎನ್ನಲಾಗಿದೆ.
ಪ್ರಸ್ತುತ ಅಂಕಿಅಂಶಗಳ ಪ್ರಕಾರ, 146 ಮೃತದೇಹಗಳನ್ನು ಗುರುತಿಸಲಾಗಿದೆ. ಅದರಲ್ಲಿ ಪ್ರಕ್ರಿಯೆ ಪೂರ್ಣಗೊಂಡ 105 ಮೃತದೇಹಗಳನ್ನು ಅವರ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. 96 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆಗಸ್ಟ್2 ರಂದು ನಡೆದ ಶೋಧ ಕಾರ್ಯದಲ್ಲಿ 40 ಮೃತದೇಹಗಳು ಪತ್ತೆಯಾಗಿದ್ದವು. ಇಂದು ಮುಂಡಕ್ಕೈ ಎಂಬಲ್ಲಿ ಭಾರತೀಯ ಸೇನೆ ನಿರ್ಮಿಸಿರುವ ಬೈಲಿ ಸೇತುವೆ ಮೂಲಕ ನದಿ ದಾಟುವ ಮೂಲಕ ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗುವುದು. ಆರು ವಲಯಗಳಲ್ಲಿ 40 ತಂಡಗಳು ಕಾರ್ಯಾಚರಣೆ ನಡೆಸಲಿದೆ ಎಂದು ಹೇಳಲಾಗಿದೆ.
ಸೇನೆ, ನೌಕಾಪಡೆ, ಎನ್ಡಿಆರ್ಎಫ್, ಡಿಎಸ್ಜಿ ಮತ್ತು ಕೋಸ್ಟ್ ಗಾರ್ಡ್ ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದು ವರದಿಗಳ ಪ್ರಕಾರ, ಪ್ರತಿ ತಂಡದಲ್ಲಿ ಮೂವರು ಸ್ಥಳೀಯರು ಮತ್ತು ಓರ್ವ ಅರಣ್ಯ ಇಲಾಖೆ ಸಿಬಂದಿಗಳು ಇರಲಿದ್ದಾರೆ. ಚಾಲಿಯಾರ್ ನದಿಯಲ್ಲಿ ಸುಮಾರು 40 ಕಿ.ಮೀ ವ್ಯಾಪ್ತಿಯಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ