Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಯಲ್ಲಾಪುರ (ಉತ್ತರ ಕನ್ನಡ): ತಾನು ಪ್ರೀತಿ ಮಾಡುತ್ತಿದ್ದ ಮಹಿಳೆಗೆ ನಡು ರಸ್ತೆಯಲ್ಲೇ ಚಾಕು ಇರಿದು ಹ*ತ್ಯೆ ಮಾಡಿದ್ದಾನೆ.
ಯಲ್ಲಾಪುರ ಪಟ್ಟಣದ ನಿವಾಸಿ ರಂಜಿತಾ ಹತ್ಯೆಯಾದ ಮಹಿಳೆ. ಈಕೆ 10 ವರ್ಷಗಳ ಹಿಂದೆ ವಿಚ್ಛೇದನ ಪಡೆದು ನಂತರ ರಫೀಕ್ ಎಂಬಾತನ ಜತೆ ಸಲುಗೆಯಿಂದ ಇದ್ದರು.
ಇಬ್ಬರೂ ಕೆಲವು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ನಂತರ ಯುವಕ ಮದುವೆ ಆಗುವುದಾಗಿ ತೀರ್ಮಾನ ಮಾಡಿದ್ದಾನೆ. ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ರಂಜಿತಾ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾಳೆ. ಇದರಿಂದ ತೀವ್ರ ಮನನೊಂದ ಆತ ಆಕೆಯನ್ನು ಚಾಕುವಿನಿಂದ ಇರಿದು ಹ*ತ್ಯೆ ಮಾಡಿದ್ದಾನೆ.
ಈಕೆಗೆ ಮಕ್ಕಳು ಸಹ ಇದ್ದು, ಯಲ್ಲಾಪುರದಲ್ಲಿ ಪೋಷಕರೊಂದಿಗೆ ಜೀವನ ಮಾಡಿಕೊಂಡು ಇದ್ದಳು. ಈಕೆ ಶಾಲೆ ಮುಗಿಸಿ ಮನೆ ಕಡೆ ಹೋಗುತ್ತಿದ್ದಾಗ ನೀನು ನನ್ನ ಮದುವೆ ಆಗ್ತೀಯಾ? ಇಲ್ಲವಾ ಎಂದು ಕೇಳಿದ್ದಾನೆ. ಅದಕ್ಕೆ ಆಕೆ ಎಂದಿನಂತೆ ಅದು ಸಾಧ್ಯವಿಲ್ಲ ಎಂದು ಹೇಳಿದಾಗ ಕೋಪಗೊಂಡ ಆತ ಈ ಕೃತ್ಯ ಎಸಗಿ ಅಲ್ಲಿಂದ ಪರಾರಿಯಾಗಿದ್ದಾನೆ.
ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡ ರಂಜಿತಾಳನ್ನು ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಆಕೆ ಕೊನೆಯುಸಿರೆಳೆದಿದ್ದಾಳೆ.
ಘಟನೆ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ರಫೀಕ್ಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.
ಯಲ್ಲಾಪುರ ಬಂದ್:
ರಂಜಿತಾ ಹ*ತ್ಯೆ ಖಂಡಿಸಿ ವಿವಿಧ ಹಿಂದು ಪರ ಸಂಘಟನೆಗಳು ಭಾನುವಾರ ಯಲ್ಲಾಪುರ ಬಂದ್ಗೆ ಕರೆನೀಡಿವೆ.
ಆರೋಪಿ ರಫೀಕ್ನನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಂಘಟನೆಗಳು ಒತ್ತಾಯಿಸಿವೆ.
ಈ ಯಂಗ್ ನಟಿಗೆ ಮದುವೆಯ ಆಫರ್ ಕೊಟ್ಟ ತಂದೆ ವಯಸ್ಸಿನ ವಿವಿಐಪಿ – ಮುಂದೇನಾಯ್ತು?