Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಯಲ್ಲಾಪುರ(ಉತ್ತರ ಕನ್ನಡ): ಯಲ್ಲಾಪುರದ ಹಿಂದೂ ಮಹಿಳೆ ರಂಜಿತಾ ಬನ್ಸೋಡೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಸ್ಫೋಟಕ ಮಾಹಿತಿ ಸಿಗುತ್ತಿದೆ.
ಈ ಮಧ್ಯೆ, ರಂಜಿತಾ ಹತ್ಯೆ ಖಂಡಿಸಿ ಹಿಂದು ಪರ ಸಂಘಟನೆಗಳು ಭಾನುವಾರ ಕರೆನೀಡಿದ್ದ ಯಲ್ಲಾಪುರ ಬಂದ್ಗೆ ಭಾರೀ ಬೆಂಬಲ ವ್ಯಕ್ತವಾಗಿದ್ದು, ನಗರದಲ್ಲಿ ಬಂದ್ ವೇಳೆ ರಂಜಿತಾ ಶವದ ಮೆರವಣಿಗೆ ಮಾಡಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ತ ಅವರು ರಂಜಿತಾ ಅವರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರಲ್ಲದೆ ಐದು ಲಕ್ಷ ಪರಿಹಾರ ನೀಡಿದರು. ಸರ್ಕಾರ ರಂಜಿತಾ ಕುಟುಂಬಕ್ಕೆ ಎರಡು ಎಕರೆ ಜಮೀನು, 50 ಲಕ್ಷ ರೂ. ಪರಿಹಾರ ನೀಡಬೇಕೆಂದು ಆಗ್ರಹಿಸಿದರು.
ರಂಜಿತಾ ಸಹೋದರ ಹಂತಕ ರಫೀಕ್ ಆಪ್ತ:
ಒಂದು ಕಡೆ ರಂಜಿತಾ ಹಂತಕ ರಫೀಕ್ ಕಾಡಿನಲ್ಲಿ ನೇಣಿಗೆ ಶರಣಾಗಿದ್ದರೆ, ಇನ್ನೊಂದೆಡೆ ಕೊಲೆಗಡುಕ ರಫೀಕ್ ಮತ್ತು ರಂಜಿತಾ ಸಹೋದರ ವೀರಭದ್ರ ಬನ್ಸೋಡೆ ಒಟ್ಟಿಗಿದ್ದ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿವೆ.
ಪ್ರಕರಣದ ಬಳಿಕ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ಫೋಟೋಗಳಲ್ಲಿ, ಆರೋಪಿ ರಫೀಕ್ ಹಾಗೂ ಮೃತ ರಂಜಿತಾ ಸಹೋದರ ವೀರಭದ್ರ ಬನ್ಸೋಡೆ ಆಪ್ತರಾಗಿರುವುದು ಎದ್ದು ಕಾಣುತ್ತಿದೆ.
ಈ ಹಿಂದೆ ಖಾಸಗಿ ಹೋಟೆಲ್ನಲ್ಲಿ ರಫೀಕ್ ಹಾಗೂ ಇತರ ಸ್ನೇಹಿತರ ಜತೆ ವೀರಭದ್ರ ಊಟ ಮಾಡುತ್ತಾ ಸೆಲ್ಫಿ ತೆಗೆದುಕೊಂಡಿದ್ದರು. ಆರೋಪಿ ರಫೀಕ್ ಮೊದಲಿನಿಂದಲೂ ಕುಟುಂಬಕ್ಕೆ ಪರಿಚಿತನಾಗಿದ್ದ ಹಾಗೂ ಸಹೋದರನ ಜೊತೆ ನಿಕಟ ಸಂಪರ್ಕ ಹೊಂದಿದ್ದ ಎಂಬುದು ಈ ಫೋಟೋಗಳಿಂದ ದೃಢಪಟ್ಟಿದೆ.
ರಫೀಕ್ ನನ್ನ ಅಕ್ಕನ ಕ್ಲಾಸ್ಮೇಟ್ ಆಗಿದ್ದ. ಮೊದಮೊದಲು ಒಳ್ಳೆಯವನಂತೆ ನಟಿಸುತ್ತಿದ್ದ. ಸಾಲದ ವಿಚಾರವಾಗಿ ಮನೆಗೆ ಬಂದು ಹೋಗುತ್ತಿದ್ದ ಅಷ್ಟೇ. ಆದರೆ ಯಾವುದೋ ಸಂಘದ ಮೂಲಕ ಅಕ್ಕನ ಮೊಬೈಲ್ ನಂಬರ್ ಸಂಗ್ರಹಿಸಿದ್ದ ರಫೀಕ್, ಆಕೆಗೆ ಪ್ರೀತಿ ಮಾಡು, ಭೇಟಿಯಾಗು ಎಂದು ಮಾನಸಿಕ ಕಿರುಕುಳ ನೀಡಲು ಆರಂಭಿಸಿದ ಎಂದು ರಂಜಿತಾ ಸಹೋದರಿ ಅಕ್ಷತಾ ತಿಳಿಸಿದ್ದಾರೆ.
ನನ್ನ ಅಕ್ಕ ಮತ್ತು ರಫೀಕ್ ನಡುವೆ ಯಾವುದೇ ಪ್ರೇಮ ಸಂಬಂಧ ಇರಲಿಲ್ಲ. ಗಂಡನ ಜತೆ ಬಾಂಧವ್ಯ ಸರಿಯಿಲ್ಲದ ಕಾರಣ ಆಕೆಯನ್ನು ತಂದು ಮನೆಯಲ್ಲಿ ಇರಿಸಿಕೊಂಡಿದ್ದೆವು. ರಫೀಕ್ ಕಾಟ ಜಾಸ್ತಿಯಾದಾಗ ನಾವು ಆತನಿಗೆ ಫೋನ್ ಮಾಡಿ ಬೈದು, ಸಂಪರ್ಕ ಬಿಡುವಂತೆ ಎಚ್ಚರಿಕೆ ನೀಡಿದ್ದೆವು. ಆದರೆ ಅದನ್ನೇ ಮನಸ್ಸಿನಲ್ಲಿಟ್ಟುಕೊಂಡು ನಿನ್ನೆ ದಾರಿಯಲ್ಲಿ ಅಡ್ಡಗಟ್ಟಿ ಅಕ್ಕನನ್ನು ಕ್ರೂರವಾಗಿ ಕೊಲೆ ಮಾಡಿದ್ದಾನೆ.
ರಫೀಕ್ ರಂಜಿತಾಗೆ ಚಾಕು ಹಾಕುವುದನ್ನು ಪ್ರತ್ಯಕ್ಷದರ್ಶಿಗಳು ನೋಡಿದ್ದರೂ, ಈಗ ಭಯದಿಂದ ಯಾರೂ ಹೇಳಿಕೆ ನೀಡಲು ಮುಂದೆ ಬರುತ್ತಿಲ್ಲ ಎಂದು ಕುಟುಂಬಸ್ಥರು ನೋವು ತೋಡಿಕೊಂಡಿದ್ದಾರೆ.
ರಂಜಿತಾ ಕೊಲೆಗೈದು ಪರಾರಿಯಾಗಿದ್ದ ರಫೀಕ್ ಪತ್ತೆಗಾಗಿ ಉತ್ತರ ಕನ್ನಡ ಜಿಲ್ಲಾ ಎಸ್ಪಿ ದೀಪನ್ ಅವರು ನಾಲ್ಕು ಪ್ರತ್ಯೇಕ ಪೊಲೀಸ್ ತಂಡಗಳನ್ನು ರಚಿಸಿದ್ದರು. ಡಾಗ್ ಸ್ಕ್ವಾಡ್ ನೆರವಿನಿಂದ ರಾಮಾಪುರ ಕಾಜಲವಾಡ ಕಾಡಿನಲ್ಲಿ ಹುಡುಕಾಟ ನಡೆಸಿದಾಗ, ಆರೋಪಿಯು ಮರವೊಂದಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಎಸ್ಪಿ ದೀಪನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಬಿಗಿ ಬಂದೋಬಸ್ತ್
ಘಟನೆಯ ಹಿನ್ನೆಲೆಯಲ್ಲಿ ಯಲ್ಲಾಪುರದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಉತ್ತರ ಕನ್ನಡ ಎಸ್ಪಿ ದೀಪನ್ ಹಾಗೂ ಉಡುಪಿ ಎಸ್ಪಿ ಹರಿರಾಮ್ ಶಂಕರ್ ನೇತೃತ್ವದಲ್ಲಿ ಭಾರಿ ಬಂದೋಬಸ್ತ್ ಕಲ್ಪಿಸಲಾಗಿದೆ. 4 ಕೆಎಸ್ಆರ್ಪಿ ಹಾಗೂ 6 ಡಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದ್ದು, ಸಾರ್ವಜನಿಕರು ಶಾಂತಿ ಕಾಪಾಡುವಂತೆ ಮನವಿ ಮಾಡಲಾಗಿದೆ.
FSL Report ಗುಂಡಿನ ರಹಸ್ಯ ಬಯಲು: ಕೈ ಕಾರ್ಯಕರ್ತನ ಸತೀಶ್ ಸತೀಶ್ ರೆಡ್ಡಿ ಅಂಗರಕ್ಷಕರ ಗುಂಡೇ ಕಾರಣ! ಇಬ್ಬರ ಬಂಧನ