Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಕಾರವಾರ: ಭಾರವಾದ ಶಾಲಾ ಬ್ಯಾಗ್ ಹೊತ್ತು 6ನೇ ತರಗತಿಯ ವಿದ್ಯಾರ್ಥಿಯೋರ್ವನ ಕೈ ಊದಿಕೊಂಡು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಘಟನೆ ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿ ನಡೆದಿದೆ.
ಶಾಲಾ ಮಕ್ಕಳ ಬ್ಯಾಗ್ ಹೊರೆ ಕಡಿಮೆ ಮಾಡಬೇಕೆಂಬ ನಿಯಮವಿದ್ದರೂ ಅದು ಪಾಲನೆಯಾಗುತ್ತಿಲ್ಲ ಎಂಬುದಕ್ಕೆ ಸಾಕ್ಷಿಯಾಗಿದೆ.
ನಗರದ ಖಾಸಗಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿರುವ ಸಮರ್ಥ ನಾಯ್ಕ ಎಂಬ ಬಾಲಕನೇ ಅಸ್ವಸ್ಥಗೊಂಡ ವಿದ್ಯಾರ್ಥಿ. ಸಮರ್ಥ ಪ್ರತಿನಿತ್ಯ ಶಾಲೆಗೆ ಬರುವಾಗ ಪಠ್ಯ ಪುಸ್ತಕ ಮತ್ತು ನೋಟ್ಸ್ಗಳ ಭಾರವಾದ ಬ್ಯಾಗ್ ಹೊತ್ತುಕೊಂಡು ಬರುತ್ತಿದ್ದ. ಈ ಅತಿಯಾದ ಭಾರದಿಂದಾಗಿ ಬಾಲಕನ ತೋಳಿನ ಎಲುಬಿಗೆ ಒತ್ತಡ ಬಿದ್ದು ಪೆಟ್ಟಾಗಿದ್ದು, ಭುಜ ಹಾಗೂ ಕೈ ಊದಿಕೊಂಡಿದೆ. ವಿಪರೀತ ನೋವು ಕಾಣಿಸಿಕೊಂಡ ಹಿನ್ನೆಲೆ ಬಾಲಕನನ್ನು ಕಾರವಾರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ವೈದ್ಯರು ಬಾಲಕನನ್ನು ಪರೀಕ್ಷಿಸಿ, ಇಷ್ಟು ಚಿಕ್ಕ ವಯಸ್ಸಿಗೆ ಕೈ ಊದಿಕೊಳ್ಳಲು ಕಾರಣವೇನೆಂದು ಪ್ರಶ್ನಿಸಿದ್ದಾರೆ. ಆಗ ಬಾಲಕ ಶಾಲಾ ಬ್ಯಾಗ್ ಬಗ್ಗೆ ಮಾಹಿತಿ ನೀಡಿದ್ದಾನೆ. ಅಲ್ಲಿದ್ದವರು ಬ್ಯಾಗ್ ಎತ್ತಿ ನೋಡಿದಾಗ, ಅದು ವಿದ್ಯಾರ್ಥಿಯ ದೇಹದ ಸಾಮರ್ಥ್ಯಕ್ಕಿಂತಲೂ ಹೆಚ್ಚು ತೂಕವಿರುವುದು ದೃಢಪಟ್ಟಿದೆ. ವೈದ್ಯರು ಬಾಲಕನಿಗೆ ತುರ್ತು ಚಿಕಿತ್ಸೆ ನೀಡಿದ್ದಾರೆ.
ತಕ್ಷಣ ಆತಂಕಗೊಂಡ ಪೋಷಕರು ವಿದ್ಯಾರ್ಥಿಯನ್ನು ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ಮಾಡಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯ ವೇಳೆ ವಿದ್ಯಾರ್ಥಿಯ ಬಲಗೈ ಮುರಿದಿರುವುದು ದೃಢಪಟ್ಟಿದೆ.
ಬರೋಬ್ಬರಿ 30 ವರ್ಷಗಳಿಂದ ಭಾರತದಲ್ಲಿ ಸರ್ಕಾರಿ ಸಂಬಳ ಪಡೆಯುತ್ತಿದ್ದ ಪಾಕ್ ಮಹಿಳೆ; ಮುಂದೆನಾಯ್ತು?