Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಶ್ರೀಲಂಕಾ ಬಳಿ ಬಂಗಾಳ ಕೊಲ್ಲಿಯಲ್ಲಿ ವಾಯುಭಾರತ ಕುಸಿತ ಹಿನ್ನೆಲೆ ವಾತವರಣದಲ್ಲಿ ದಿಢೀರ್ ಬದಲಾವಣೆ ಆಗಿದೆ. ಇವತ್ತು ಸಹ ಮಳೆ ಜೊತೆ ಚಳಿ ವಾತವರಣ ಮುಂದುವರೆಯುವ ಸಾಧ್ಯತೆ ಇದೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಮೋಡ ಕವಿದ ವಾತವರಣ ಮುಂದುವರೆಯಲಿದೆ. ಇನ್ನು ಬೇರೆ ಬೇರೆ ಕಡೆ ತುಂತುರು ಮಳೆಯಾಗಲಿದೆ.
ತೀವ್ರಗೊಳ್ಳುತ್ತಿರುವ ಶೀತಗಾಳಿಯಿಂದಾಗಿ ಬೀದರ್, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಹಳದಿ ಎಚ್ಚರಿಕೆ ನೀಡಿದೆ. ಜನ ಎಚ್ಚರದಿಂದ ಇರುವಂತೆ ಸೂಚಿಸಲಾಗಿದೆ.
ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಮತ್ತು ಬಳ್ಳಾರಿ ಸೇರಿದಂತೆ ಉತ್ತರ ಒಳನಾಡಿನ ಹಲವಾರು ಜಿಲ್ಲೆಗಳಲ್ಲಿ ನಿರಂತರ ಶುಷ್ಕ ಮತ್ತು ಶೀತ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ.
https://www.newsics.com/2026/01/12/officials-say-gold-found-in-lakkundi-is-not-treasure/