Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ರಾಯಚೂರು: ತಿಂಥಣಿ ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಪೀಠಾಧ್ಯಕ್ಷರಾದ ಸಿದ್ದರಾಮಾನಂದ ಸ್ವಾಮೀಜಿ (49) (Siddaramananda Swamiji) ಅವರು ಹೃದಯಾಘಾತದಿಂದ ಬ್ರಹ್ಮೈಕ್ಯರಾಗಿದ್ದಾರೆ.
ಇದರ ಬೆನ್ನಲ್ಲೇ ಅವರ ಪೂರ್ವಾಶ್ರಮದ ತಾಯಿ ಮಹತ್ವದ ವಿಷಯವೊಂದನ್ನು ಬಹಿರಂಗಪಡಿಸಿದ್ದಾರೆ.
ಶ್ರೀಗಳಿಗೆ ಎರಡು ಕಿಡ್ನಿ ವಿಫಲವಾದಾಗ ಕಣ್ಣೀರಿಟ್ಟಿದ್ದ ತಾಯಿ ಜಯಮ್ಮ, ಸನ್ಯಾಸತ್ವ ಸ್ವೀಕರಿಸಿದರೂ ಮಗನ ಜೀವ ಉಳಿಸಲು ತಮ್ಮ ಕಿಡ್ನಿಯನ್ನೇ ದಾನ ಮಾಡಿದ್ದರು ಎಂಬ ವಿಷಯ ರಿವೀಲ್ ಆಗಿದೆ.
ಜಯಮ್ಮ ಅವರ ಎಡಭಾಗದ ಕಿಡ್ನಿಯನ್ನು, ಶ್ರೀಗಳ ಬಲಭಾಗಕ್ಕೆ ಕಿಡ್ನಿ ಕಸಿ ಮಾಡಲಾಗಿತ್ತು. 7 ವರ್ಷದ ಹಿಂದೆ ಮಣಿಪಾಲ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆದಿತ್ತು ಎಂಬ ವಿಷಯ ಪ್ರಸ್ತಾಪಿಸಿ ಜಯಮ್ಮ ಅವರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಇನ್ನು ತಮ್ಮ ಪೂರ್ವಾಶ್ರಮದ ತಾಯಿ ಕಿಡ್ನಿ ಕೊಡುತ್ತೇನೆ ಎಂದಿದ್ದಕ್ಕೆ ಶ್ರೀಗಳು ಬೇಡ ಎಂದಿದ್ದರು. ಬಳಿಕ ಸಿದ್ದರಾಮಯ್ಯನವರಿಂದ ಮನವೊಲಿಕೆ ಬಳಿಕ ಶ್ರೀಗಳು ಒಪ್ಪಿದ್ದರು ಎನ್ನಲಾಗಿದೆ.
https://www.newsics.com/2026/01/16/son-cries-over-mothers-body-after-dying-of-hiv/