Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು:ಪ್ರತಿ ವರ್ಷ ಜ.26ರಂದು ದೆಹಲಿಯ ರಾಜಪಥ್ನಲ್ಲಿ ನಡೆಯುವ ಗಣರಾಜ್ಯೋತ್ಸವ ದಿನಾಚರಣೆಯ ಪರೇಡ್ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಪ್ರದರ್ಶನ ಮಾಡಲಾಗುತ್ತಿತ್ತು. ಆದ್ರೆ ಈ ಬಾರಿ ದೆಹಲಿ ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಈ ಬಾರಿ ಅವಕಾಶ ನೀಡಿಲ್ಲ.
ಆತ್ಮ ನಿರ್ಭರ ಭಾರತಕ್ಕೆ ಸಿರಿಧಾನ್ಯದಿಂದ ತಂತ್ರಜ್ಞಾನದವರೆಗೆ ರಾಜ್ಯದ ಸಮಗ್ರ ಕೊಡುಗೆಯ ಸಂಕೇತವಾಗಿ ಗಣರಾಜ್ಯೋತ್ಸವ ಪರೇಡ್ ನಲ್ಲಿ ಮಿಲ್ಲೆಟ್ಸ್ ಟು ಮೈಕ್ರೋಚಿಪ್ ಸ್ಥಬ್ಧ ಚಿತ್ರ ಪ್ರದರ್ಶನಕ್ಕೆ ಯೋಜಿಸಲಾಗಿತ್ತು.
ಆದರೆ ಪ್ರಸ್ತಾಪ ಅಂಗೀಕಾರವಾಗದ ಕಾರಣ ಕರ್ತವ್ಯ ಪಥದಲ್ಲಿ ನಡೆಯುವ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಈ ಬಾರಿ ಪಾಲ್ಗೊಳ್ಳುತ್ತಿಲ್ಲ. ಬದಲಿಗೆ ಪ್ರಗತಿ ಮೈದಾನದಲ್ಲಿ ಸ್ತಬ್ಧ ಚಿತ್ರ ವೀಕ್ಷಣೆಗೆ ಅನುವು ಮಾಡಿಕೊಡಲಾಗಿದೆ ಎಂದು ಹೇಳಲಾಗಿದೆ.
https://www.newsics.com/2026/01/17/central-government-blocks-242-illegal-betting-gambling-websites/