Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ನೋಯ್ಡಾ: ದಟ್ಟ ಮಂಜಿನಿಂದಾಗಿ, ಟೆಕ್ಕಿಯೊಬ್ಬರು ಕಾರು ಸಮೇತ 70 ಅಡಿ ಆಳದ ನೀರಿನ ಹೊಂಡಕ್ಕೆ ಬಿದ್ದು ಮೃತಪಟ್ಟಿರುವ ಧಾರುಣ ಘಟನೆ ನೋಯ್ಡಾದಲ್ಲಿ ನಡೆದಿದೆ.
ನೋಯ್ಡಾದ ಸೆಕ್ಟರ್ 150ಯಲ್ಲಿ ಟೆಕ್ಕಿಯೋರ್ವ ಕಾರಿನಲ್ಲಿ ತೆರಳುತ್ತಿದ್ದಾಗ ದಟ್ಟಮಂಜಿನ ಪರಿಣಾಮ ರಸ್ತೆ ಕಾಣದೇ ಕಾರು ಸಮೇತ ನಿರ್ಮಾಣ ಹಂತದ ಕಟ್ಟಡದ ಗುಂಡಿಗೆ ಬಿದ್ದಿದ್ದಾರೆ. ಈ ವೇಳೆ ಸತತ ಹೋರಾಟದ ಹೊರತಾಗಿಯೂ ದುರಂತ ಸಾವನ್ನಪ್ಪಿದ್ದಾರೆ.
ಶುಕ್ರವಾರ ರಾತ್ರಿ ಸೆಕ್ಟರ್ 150 ರ ಬಳಿ ಈ ದುರಂತ ಘಟನೆ ನಡೆದಿದ್ದು, ಟೆಕ್ಕಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ದಟ್ಟವಾದ ಮಂಜು ಮತ್ತು ಕಡಿಮೆ ಗೋಚರತೆಯಿಂದಾಗಿ ಕಾರು ನಿಯಂತ್ರಣ ತಪ್ಪಿ ರಸ್ತೆ ತಿರುವಿನ ಬಳಿ ಇರುವ ನೀರು ತುಂಬಿದ ನಿರ್ಮಾಣ ಗುಂಡಿಗೆ ಡಿಕ್ಕಿ ಹೊಡೆದಿದೆ.
ಕಾರು ಎರಡು ಗಂಟೆಗಳ ಕಾಲ ಕಾರು ನೀರಿನ ಮೇಲೆ ತೇಲುತ್ತಿತ್ತು. ಆದರೆ ಯಾರ ಕಣ್ಣಿಗೂ ಬೀಳಲಿಲ್ಲ, ಇದೇ ಸಂದರ್ಭದಲ್ಲಿ ಅದೇ ಮಾರ್ಗದಲ್ಲಿ ಸಾಗುತ್ತಿದ್ದ ಡೆಲಿವರಿ ಏಜೆಂಟ್ ಅದನ್ನು ಗಮನಿಸಿ ಕೂಡಲೇ ಕೆಳಗೆ ದುಮುಕಿದ್ದಾರೆ. ಸತತ ಹರಸಾಹಸದ ಹೊರತಾಗಿಯೂ ಟೆಕ್ಕಿ ಸಾವನ್ನಪ್ಪಿದ್ದಾರೆ.
ಜೇಬಿನಲ್ಲಿದ್ದ ಮೊಬೈಲ್ ಹೊರತೆಗೆದು ತಮ್ಮ ತಂದೆ ರಾಜಕುಮಾರ್ ಮೆಹ್ತಾ ಅವರಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ. ಅಪ್ಪ
ನಾನು ನೀರು ತುಂಬಿದ ಆಳವಾದ ಗುಂಡಿಗೆ ಬಿದ್ದಿದ್ದೇನೆ. ನಾನು ಮುಳುಗುತ್ತಿದ್ದೇನೆ. ದಯವಿಟ್ಟು ಬಂದು ನನ್ನನ್ನು ಉಳಿಸಿ. ನನಗೆ ಸಾಯಲು ಇಷ್ಟವಿಲ್ಲ ಎಂದು ಕೇಳಿಕೊಂಡಿದ್ದಾನೆ. ಆ ತಕ್ಷಣವೇ ತಂದೆ 112ಗೆ ಕರೆ ಮಾಡಿ ಸ್ಥಳಕ್ಕೆ ಧಾವಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಬಂದರಾದರೂ, ಮೈ ಹೆಪ್ಪುಗಟ್ಟಿಸುವ ಚಳಿ ಮತ್ತು ನೀರಿನ ಆಳದ ಭಯದಿಂದ ಯಾರೂ ನೀರಿಗೆ ಇಳಿಯಲು ಧೈರ್ಯ ಮಾಡಲಿಲ್ಲ. ಯುವರಾಜ್ ಕಾರಿನ ಮೇಲೇರಿ ನಿಂತು ಟಾರ್ಚ್ ತೋರಿಸುತ್ತಾ ನನ್ನನ್ನು ಉಳಿಸಿ ಎಂದು ಕಿರುಚುತ್ತಿದ್ದರೂ ಅಧಿಕಾರಿಗಳು ಅಸಹಾಯಕರಾದರು.
ಬಿಗ್ ಬಾಸ್ ಟೈಟಲ್ ವಿನ್ನಿಂಗ್ ಸನಿಹದಲ್ಲೇ 3ನೇ ರನ್ನರ್ ಅಪ್ ಕಾವ್ಯ ಶೈವ ಔಟ್