Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಮೈಸೂರು: ಕಳೆದ ವರ್ಷ ಗಲಭೆಯಿಂದ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಮೈಸೂರಿನ ಉದಯಗಿರಿಯಲ್ಲಿ ಮತ್ತೆ ಆತಂಕಕಾರಿ ಘಟನೆ ನಡೆದಿದೆ.
ಮೈಸೂರಿನ ಅಬುಜರ್ ಮಸೀದಿ ಸಮೀಪದ ಪಾರ್ಕಿನಲ್ಲಿ ಉದಯಗಿರಿಯ ಶಕಿಬುಲ್ ರೆಹಮಾನ್ ಅಲಿಯಾಸ್ ಟಿಪ್ಪು, ಇಮ್ರಾನ್, ಆಸೀಫ್, ಅಜಾಂ, ಅಜೀಜ್ ಎಂಬವರ ನಡುವೆ ಕ್ರಿಕೆಟ್ ಆಟದ ವಿಚಾರವಾಗಿ ಮಾರಾಮಾರಿ ನಡೆದಿದ್ದು, ಲಾಂಗು ಮಚ್ಚುಗಳನ್ನು ಹಿಡಿದುಕೊಂಡು ಸಾರ್ವಜನಿಕವಾಗಿ ಓಡಾಡಿದ್ದಾರೆ.
ಭಾನುವಾರ ನಡೆದ ಈ ಘಟನೆಯ ದೃಶ್ಯ ಮೊಬೈಲ್ ಕ್ಯಾಮರಾಗಳಲ್ಲಿ ಸರಿಯಾಗಿದೆ. ಘಟನೆ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
https://www.newsics.com/2026/01/19/two-software-employees-die-after-drinking-19-beers-while-betting/