Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು : ವಿಧಾನಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಿರಾಕರಿಸಿದ್ದಾರೆ.
ನಾಳೆಯಿಂದ ಅಧಿವೇಶನ ಆರಂಭವಾಗಲಿದೆ. ಆದ್ರೆ, ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿದ್ದಾರೆ. ಅತ್ತ, ರಾಜ್ಯಪಾಲರನ್ನು ಭೇಟಿಯಾಗಿಮನವೊಲಿಸಲು ಸರ್ಕಾರ ಮುಂದಾಗಿದೆ.
ಕೇಂದ್ರ ಸರ್ಕಾರದ ವಿ ಬಿ ಜಿ ರಾಮ್ ಜಿ ಯೋಜನೆ ವಿರುದ್ಧದ ಅಂಶಗಳನ್ನು ಓದಬೇಕೆಂದು ಭಾಷಣ ಮಾಡಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಗವರ್ನರ್ ಭಾಷಣದಲ್ಲಿ ಆ ಅಂಶಗಳನ್ನು ಸೇರಿಸಲು ಸರ್ಕಾರ ಪ್ರಯತ್ನ ಮಾಡಿತ್ತು, ಅದನ್ನು ಅರಿತು ರಾಜ್ಯಪಾಲರು, ಭಾಷಣ ಮಾಡದೇ ಇರುವ ಬಗ್ಗೆ ನಿರ್ಣಯ ಕೈಗೊಂಡಿದ್ದಾರೆ. ಈ ಮೂಲಕ ಸರ್ಕಾರಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಶಾಕ್ ಕೊಟ್ಟಿದ್ದಾರೆ.
ಒಂದು ವೇಳೆ ಜಂಟಿ ಅಧಿವೇಶನಕ್ಕೆ ರಾಜ್ಯಪಾಲರು ಬರದಿದ್ರೆ ಸಾಂವಿಧಾನಿಕ ಬಿಕ್ಕಟ್ಟು ಎದುರಾಗುವ ಸಾಧ್ಯತೆಯಿದೆ. ವರ್ಷದ ಮೊದಲ ಅಧಿವೇಶನವನ್ನು ರಾಜ್ಯಪಾಲರ ಭಾಷಣದೊಂದಿಗೆ ಆರಂಭಿಸಬೇಕು ಎಂಬ ನಿಯಮವಿದೆ. ಆದ್ದರಿಂದ ಒಂದು ವೇಳೆ ಬರದಿದ್ರೆ ದೊಡ್ಡ ಬಿಕ್ಕಟ್ಟು ಎದುರಾಗುವ ಸಾಧ್ಯತೆಯಿದೆ. ಜನವರಿ 22ರಂದು ಬೆಳಿಗ್ಗೆ 11 ಗಂಟೆಗೆ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಬೇಕಿತ್ತು.
ನಾಳೆಯಿಂದ ಅಧಿವೇಶನ ನಡೆಸಲು ನಿರ್ಧರಿಸಲಾಗಿದ್ದು, ಜ. 24 ಶನಿವಾರ, ಜ. 25 ಭಾನುವಾರ ಮತ್ತು ಜನವರಿ 26ರ ಸೋಮವಾರ ಗಣರಾಜ್ಯೋತ್ಸವ ಸೇರಿ ಮೂರು ದಿನ ಸಾರ್ವತ್ರಿಕ ರಜಾ ದಿನ ಇರಲಿದೆ. ನಂತರ ಜನವರಿ 27 ರಿಂದ 31ರ ಶನಿವಾರದವರೆಗೆ ಐದು ದಿನ ಸತತವಾಗಿ ಕಲಾಪ ನಡೆಯಲಿದ್ದು, ಒಟ್ಟು 7 ದಿನಗಳ ಕಾಲ ವಿಧಾನ ಮಂಡಲ ಉಭಯ ಸದನಗಳ ಅಧಿವೇಶನ ಫಿಕ್ಸ್ ಆಗಿತ್ತು.