https://youtube.com/shorts/qpCJajqGxrE?si=vJgoarkrMD0AAjgU
ಐತಿಹಾಸಿಕ ಲಕ್ಕುಂಡಿ ಪಟ್ಟಣದಲ್ಲಿ ಇತ್ತೀಚೆಗೆ ಮನೆ ನಿರ್ಮಾಣದ ವೇಳೆ ಬಂಗಾರದ ನಿಧಿ ಪತ್ತೆಯಾದ ಘಟನೆ ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಘಟನೆಯ ನಂತರ ಲಕ್ಕುಂಡಿಯ ಇತಿಹಾಸ, ಪಾರಂಪರಿಕ ಮಹತ್ವ ಹಾಗೂ ಅಭಿವೃದ್ಧಿ ಸಾಧ್ಯತೆಗಳ ಬಗ್ಗೆ ಮತ್ತೆ ಗಮನ ಸೆಳೆಯಲಾಗಿದೆ.
ಇದೀಗ ಸರ್ಕಾರದ ವತಿಯಿಂದ ಲಕ್ಕುಂಡಿಯಲ್ಲಿ ಅಧಿಕೃತ ಉತ್ಖನನ ಕಾರ್ಯ ಕೂಡ ಆರಂಭಗೊಂಡಿದ್ದು, ಉತ್ಖನನದಲ್ಲಿ ಅನೇಕ ಅಮೂಲ್ಯ ಹಾಗೂ ಐತಿಹಾಸಿಕ ವಸ್ತುಗಳು ಪತ್ತೆಯಾಗುತ್ತಿವೆ. ಇದರೊಂದಿಗೆ ಇಲ್ಲಿನ ಜಮೀನಿನ ಬೆಲೆಗಳು ಕೂಡ ದುಪ್ಪಟ್ಟಾಗಿವೆ.
ಕಳೆದ 8 ದಿನದಿಂದ ನಡೆಯುತ್ತಿರುವ ಉತ್ಖನನ ಕಾರ್ಯದಲ್ಲಿ ಹಲವು ಕಾರ್ಮಿಕರು ಭಾಗಿಯಾಗಿದ್ದಾರೆ. ಈ ಹಿಂದೆ ಲಕ್ಕುಂಡಿ ಗ್ರಾಮದಲ್ಲಿ ಎಕರೆಗೆ 30 ರಿಂದ 40 ಲಕ್ಷ ರು.ನಷ್ಟಿದ್ದ ಜಮೀನಿನ ಬೆಲೆ ನಿಧಿ ಪತ್ತೆಯಾದ ಬೆನ್ನಲ್ಲೇ ಏಕಾಏಕಿ ₹80 ಲಕ್ಷದಿಂದ ₹1 ಕೋಟಿಯವರೆಗೆ ಏರಿಕೆಯಾಗಿದೆ ಎನ್ನುತ್ತಾರೆ ರಿಯಲ್ ಎಸ್ಟೇಟ್ ಉದ್ಯಮಿಗಳು.
Lಗದಗ-ಕೊಪ್ಪಳ ರಸ್ತೆಯಲ್ಲಿಯೇ ಲಕ್ಕುಂಡಿ ಬರುವುದೂ ಕೂಡ ಈಗ ಲಕ್ಕುಂಡಿಯ ರಿಯಲ್ ಎಸ್ಟೇಟ್ ಜೊಮ್ ಆಗಲು ಕಾರಣವಾಗಿದೆ. ನಿಧಿ ಸಿಕ್ಕ ಆಸುಪಾಸಲ್ಲಿ ಜನ ಇದಕ್ಕಿಂತ ಹಣ ಕೊಟ್ಟು ಭೂಮಿ ಖರೀದಿಸಲು ಮುಂದಾಗಿದ್ದಾರೆ.
ಲಕ್ಕುಂಡಿ ವಿಶ್ವ ಪಾರಂಪರಿಕ ಪಟ್ಟಿಗೆ ಸೇರ್ಪಡೆಯಾಗುವ ಸಾಧ್ಯತೆ ದಟ್ಟವಾಗಿರುವುದರಿಂದ ಹೂಡಿಕೆದಾರರು ಆಸಕ್ತಿ ತೋರುತ್ತಿದ್ದು, ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಜಮೀನುಗಳಿಗಾಗಿ ಗದಗ, ಹುಬ್ಬಳ್ಳಿ ಸೇರಿದಂತೆ ಹೊರ ಜಿಲ್ಲೆಗಳ ಉದ್ಯಮಿಗಳು ಈಗಿನಿಂದಲೇ ಮುಗಿಬೀಳುತ್ತಿದ್ದಾರೆ.
ಉತ್ಖನನ ನಡೆಯುವ ಜಾಗಕ್ಕೆ ಧಾರವಾಡ ಕೃಷಿ ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಭೇಟಿ ನೀಡಿ, ಉತ್ಖನನ ನಡೆಯು ಸ್ಥಳ ವೀಕ್ಷಿಸಿ, ಉತ್ಖನನ ನಿಯಮಗಳು ಅವುಗಳನ್ನು ಸಂಗ್ರಹಿಸುವ ರೀತಿ ಸೇರಿದಂತೆ ವಿವಿಧ ವಿಷಯ ಕುರಿತು ಮಾಹಿತಿ ಪಡೆದುಕೊಂಡರು.ಪುರಾತತ್ವ ಇಲಾಖೆಯ ತಜ್ಞರು ಮಣ್ಣಿನ ಬಿಲ್ಲೆಗಳು ಮತ್ತು ಮೂಳೆಗಳನ್ನು ಹೆಚ್ಚಿನ ಸಂಶೋಧನೆಗೆ ಒಳಪಡಿಸಲಿದ್ದಾರೆ.
https://www.newsics.com/2026/01/24/a-young-woman-was-approached-by-a-man-who-came-naked-in-a-car/