https://youtube.com/shorts/qpCJajqGxrE?si=vJgoarkrMD0AAjgU
Subscribe ನ್ಯೂಸಿಕ್ಸ್ ಕನ್ನಡ
newsics.com
ಕಲಬುರಗಿ: ಬದುಕಿ ಬಾಳಬೇಕು ಎಂಬ ಆಸೆಯಿಂದ ಪ್ರೀತಿಸಿ ಎರಡು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತೆಯೊಬ್ಬಳು ಜೀವ ಕಳೆದುಕೊಂಡ ಹೃದಯವಿದ್ರಾವಕ ಘಟನೆ ನಗರದ ಸಿದ್ದೇಶ್ವರ ಕಾಲೊನಿಯಲ್ಲಿ ನಡೆದಿದೆ.
ಮೃತಳನ್ನು ಅನಸೂಯಾ ಅವಿನಾಶ್ ಆಕಡೆ (26) ಎಂದು ಗುರುತಿಸಲಾಗಿದ್ದು, ಅನಸೂಯಾ ತನ್ನ ಅತ್ತೆ ಮಗ ಅವಿನಾಶ್ ಅವರನ್ನು ಪ್ರೀತಿಸಿ, ಎರಡು ತಿಂಗಳ ಹಿಂದಷ್ಟೇ ಎರಡು ಕುಟುಂಬಸ್ಥರ ಸಮ್ಮುಖದಲ್ಲಿ ಸಪ್ತಪದಿ ತುಳಿದು ಮದುವೆಯಾಗಿದ್ದಳು.
ಮದುವೆಯ ನಂತರ ಗಂಡನೊಂದಿಗೆ ಹಳ್ಳಿಯಲ್ಲಿ ವಾಸಿಸುವುದಕ್ಕೆ ಅನಸೂಯಾಗೆ ಇಷ್ಟವಿರಲಿಲ್ಲ. ಇದೇ ವಿಚಾರವಾಗಿ ಮಾನಸಿಕವಾಗಿ ನೊಂದಿದ್ದಳು ಎನ್ನಲಾಗಿದೆ.
ಅವಳ ಮೂವರು ಸಹೋದರಿಯರು ಗಂಡಂದಿರೊಂದಿಗೆ ಬೆಂಗಳೂರು ಹಾಗೂ ಮುಂಬೈ ಮುಂತಾದ ಮಹಾನಗರಗಳಲ್ಲಿ ವಾಸವಾಗಿದ್ದರೆ, ತಾನು ಚಿಕ್ಕ ಹಳ್ಳಿಯಲ್ಲಿ ಜೀವನ ನಡೆಸಬೇಕಾಗಿರುವುದರಿಂದ ಬೇಸರಗೊಂಡಿದ್ದಳು ಎಂದು ತಿಳಿದುಬಂದಿದೆ.
ಈ ಮಾನಸಿಕ ಒತ್ತಡವೇ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.