Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಿಕ್ಷಕರಿಗೆ ಗುಡ್ ನ್ಯೂಸ್: 12 ವರ್ಷ ಸೇವೆ ಸಲ್ಲಿಸಿದರೆ ಇನ್ಮುಂದೆ ಹೆಡ್ ಮಾಸ್ಟರ್ ಹುದ್ದೆ
ಕರ್ನಾಟಕಪ್ರಮುಖ

ಶಿಕ್ಷಕರಿಗೆ ಗುಡ್ ನ್ಯೂಸ್: 12 ವರ್ಷ ಸೇವೆ ಸಲ್ಲಿಸಿದರೆ ಇನ್ಮುಂದೆ ಹೆಡ್ ಮಾಸ್ಟರ್ ಹುದ್ದೆ

Share
2 Min Read
SHARE

https://youtube.com/shorts/qpCJajqGxrE?si=vJgoarkrMD0AAjgU

Subscribe ನ್ಯೂಸಿಕ್ಸ್ ಕನ್ನಡ

newsics.com

ರಾಜ್ಯ ಸರ್ಕಾರವು ಶಿಕ್ಷಕರ ಬಡ್ತಿ ನಿಯಮಗಳನ್ನು ಪರಿಷ್ಕರಿಸಲು ನಿರ್ಧರಿಸಿದ್ದು, ಈ ಮೂಲಕ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆಗೆ ಏರಲು ಸಮಾನ ಅವಕಾಶ ಕಲ್ಪಿಸಲು ಮುಂದಾಗಿದೆ.
ಈ ಸಂಬಂಧ ಸರ್ಕಾರವು ಕರಡು ಅಧಿಸೂಚನೆಯನ್ನು ಹೊರಡಿಸಿದ್ದು, ದಶಕಗಳಷ್ಟು ಹಳೆಯದಾದ ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲು ಸಜ್ಜಾಗಿದೆ.
ಸದ್ಯ ಇರುವ ನಿಯಮಗಳ ಪ್ರಕಾರ, ಕೇವಲ ಹಿರಿಯ ಶ್ರೇಣಿಯ ಶಿಕ್ಷಕರಿಗೆ ಅಥವಾ ನಿರ್ದಿಷ್ಟ ವೃಂದದವರಿಗೆ ಮಾತ್ರ ಮುಖ್ಯ ಶಿಕ್ಷಕರಾಗುವ ಅವಕಾಶವಿತ್ತು. ಇದರಿಂದಾಗಿ ಪದವೀಧರ ಪ್ರಾಥಮಿಕ ಶಿಕ್ಷಕರು (6ರಿಂದ 8ನೇ ತರಗತಿ ಬೋಧಿಸುವವರು) ಎಷ್ಟೇ ವರ್ಷ ಸೇವೆ ಸಲ್ಲಿಸಿದರೂ ಬಡ್ತಿ ಭಾಗ್ಯದಿಂದ ವಂಚಿತರಾಗುತ್ತಿದ್ದರು. ಈ ತಾರತಮ್ಯವನ್ನು ಹೋಗಲಾಡಿಸಲು ಮತ್ತು ಅರ್ಹ ಶಿಕ್ಷಕರಿಗೆ ನ್ಯಾಯ ಒದಗಿಸಲು ಶಿಕ್ಷಣ ಇಲಾಖೆ ಈ ಹೊಸ ಹೆಜ್ಜೆ ಇಟ್ಟಿದೆ.
ಹೊಸ ನಿಯಮದಲ್ಲೇನಿದೆ?
ಸರ್ಕಾರವು ‘ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) (ನೇಮಕಾತಿ) (ತಿದ್ದುಪಡಿ) ನಿಯಮಗಳು-2026’ ಎಂಬ ಹೆಸರಿನಲ್ಲಿ ಕರಡು ನಿಯಮಗಳನ್ನು ರೂಪಿಸಿದೆ. ಇದರ ಪ್ರಮುಖ ಅಂಶಗಳು ಈ ಕೆಳಗಿನಂತಿವೆ:
1. ಉಭಯ ವೃಂದಗಳಿಗೂ ಬಡ್ತಿ: ಇನ್ನು ಮುಂದೆ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ (1ರಿಂದ 5ನೇ ತರಗತಿ) ಬೋಧಿಸುವ ‘ಪಿಎಸ್‌ಟಿ’ ಶಿಕ್ಷಕರು ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ (6ರಿಂದ 8ನೇ ತರಗತಿ) ಬೋಧಿಸುವ ‘ಜಿಪಿಟಿ’ ಶಿಕ್ಷಕರು ಇಬ್ಬರೂ ಕೂಡ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ಪಡೆಯಲು ಅರ್ಹರಾಗಿರುತ್ತಾರೆ.
2.ಬಡ್ತಿ ಅನುಪಾತ: ಬಡ್ತಿ ನೀಡುವಾಗ ಒಂದು ನಿರ್ದಿಷ್ಟ ಅನುಪಾತವನ್ನು ಪಾಲಿಸಲು ಸೂಚಿಸಲಾಗಿದೆ. ಖಾಲಿ ಇರುವ ಪ್ರತಿ ಮೂರು ಮುಖ್ಯ ಶಿಕ್ಷಕರ ಹುದ್ದೆಗಳಲ್ಲಿ, ಎರಡು ಹುದ್ದೆಗಳನ್ನು ಪಿಎಸ್‌ಟಿ ವೃಂದದ ಶಿಕ್ಷಕರಿಗೆ ಮತ್ತು ಒಂದು ಹುದ್ದೆಯನ್ನು ಜಿಪಿಟಿ ವೃಂದದ ಶಿಕ್ಷಕರಿಗೆ ನೀಡಲಾಗುತ್ತದೆ (2:1 ಅನುಪಾತ). ಇದುವರೆಗೂ ಜಿಪಿಟಿ ಶಿಕ್ಷಕರಿಗೆ ಪ್ರಮೋಷನ್ ಅವಕಾಶವೇ ಇಲ್ಲದಂತಾಗಿತ್ತು, ಈಗ ಅವರಿಗೆ ಶೇ.33 ರಷ್ಟು ಪಾಲು ಸಿಗಲಿದೆ.
3. 12 ವರ್ಷ ಸೇವೆ ಕಡ್ಡಾಯ: ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ಪಡೆಯಲು ಶಿಕ್ಷಕರು ಕನಿಷ್ಠ 12 ವರ್ಷಗಳ ಸೇವೆಯನ್ನು ಪೂರೈಸಿರಬೇಕು ಎಂಬುದು ಕಡ್ಡಾಯವಾಗಿದೆ. ಈ ನಿಯಮವು ಎರಡೂ ವೃಂದದ ಶಿಕ್ಷಕರಿಗೆ ಸಮಾನವಾಗಿ ಅನ್ವಯಿಸುತ್ತದೆ.
ಆಕ್ಷೇಪಣೆ ಸಲ್ಲಿಸಲು ಅವಕಾಶ
ಈ ಹೊಸ ಕರಡು ನಿಯಮಗಳ ಬಗ್ಗೆ ಸಾರ್ವಜನಿಕರು, ಶಿಕ್ಷಕರು ಅಥವಾ ಶಿಕ್ಷಣ ತಜ್ಞರು ಯಾವುದೇ ಆಕ್ಷೇಪಣೆ ಅಥವಾ ಸಲಹೆಗಳನ್ನು ಹೊಂದಿದ್ದರೆ, ಅದನ್ನು ಸಲ್ಲಿಸಲು ಸರ್ಕಾರ ಅವಕಾಶ ನೀಡಿದೆ.

ಜನವರಿ 21, 2026 ರಿಂದ ಆಕ್ಷೇಪಣೆ ಸಲ್ಲಿಕೆ ಅವಧಿ ಆರಂಭವಾಗಿದೆ. ಅಧಿಸೂಚನೆ ಪ್ರಕಟವಾದ ದಿನಾಂಕದಿಂದ 15 ದಿನಗಳ ಒಳಗಾಗಿ ಆಕ್ಷೇಪಣೆಗಳನ್ನು ಸಲ್ಲಿಸಬೇಕು. ಆಕ್ಷೇಪಣೆಗಳನ್ನು ಲಿಖಿತ ರೂಪದಲ್ಲಿ “ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬಹುಮಹಡಿಗಳ ಕಟ್ಟಡ, ಬೆಂಗಳೂರು” ಇವರಿಗೆ ತಲುಪಿಸಬೇಕು.

ರಾಜ್ಯದಲ್ಲಿ 2016-17ನೇ ಸಾಲಿನಲ್ಲಿ 15,000ಕ್ಕೂ ಹೆಚ್ಚು ಪದವೀಧರ ಪ್ರಾಥಮಿಕ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿತ್ತು. ಆದರೆ, ಅಂದು ನೇಮಕವಾದ ಶಿಕ್ಷಕರಿಗೆ ಇಂದಿನವರೆಗೂ ಬಡ್ತಿ ನಿಯಮಗಳಲ್ಲಿ ಸ್ಪಷ್ಟತೆ ಇರಲಿಲ್ಲ. ಅವರು ನಿವೃತ್ತಿಯವರೆಗೂ ಸಹಶಿಕ್ಷಕರಾಗಿಯೇ ಉಳಿಯುವ ಆತಂಕವಿತ್ತು. ಈಗ ಹೊಸ ನಿಯಮ ಜಾರಿಗೆ ಬಂದರೆ, ಈ ಶಿಕ್ಷಕರಿಗೆ ಸೇವಾ ಹಿರಿತನ ಮತ್ತು ಬಡ್ತಿಯ ಅವಕಾಶ ದೊರೆಯಲಿದೆ. ಇದು ಶಿಕ್ಷಕ ಸಮುದಾಯದಲ್ಲಿ ಹೊಸ ಉತ್ಸಾಹವನ್ನು ಮೂಡಿಸಿದೆ.

ಬೆಳಗಾವಿ ಗಡಿಯಲ್ಲಿ 400 ಕೋಟಿ ರೂ. ಇದ್ದ 2 ಕಂಟೇನರ್ ಗಳು ಹೈಜಾಕ್

TAGGED:Good news for teachers: Headmaster post after 12 years of service
Share This Article
Facebook Twitter Copy Link Print
Previous Article ಬೆಳಗಾವಿ ಗಡಿಯಲ್ಲಿ 400 ಕೋಟಿ ರೂ. ಇದ್ದ 2 ಕಂಟೇನರ್ ಗಳು ಹೈಜಾಕ್
Next Article ಹಾಸಿಗೆಗೆ ಪತಿಯನ್ನು ಕಟ್ಟಿಹಾಕಿದ ಪತ್ನಿ, ಅತ್ತೆ ಮಾಡಿದ್ದೇನು?; ವೈರಲ್ ವಿಡಿಯೋ ನೋಡಿ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?