https://youtube.com/shorts/qpCJajqGxrE?si=vJgoarkrMD0AAjgU
Subscribe ನ್ಯೂಸಿಕ್ಸ್ ಕನ್ನಡ
newsics.com
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿಗೆ ಮಾದಪ್ಪನ ಭಕ್ತನೊಬ್ಬ ಬಲಿಯಾದ ಘಟನೆ ಹಿನ್ನೆಲೆ, ಚಾಮರಾಜನಗರ ಜಿಲ್ಲಾಡಳಿತ ಪಾದಯಾತ್ರಿಕರು ಹಾಗೂ ದ್ವಿಚಕ್ರ ವಾಹನ ಸವಾರರಿಗೆ ಹೊಸ ಆದೇಶವನ್ನು ಹೊರಡಿಸಿದೆ.
ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪಾ ಅವರು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಮಾದಪ್ಪನ ದರ್ಶನಕ್ಕೆ ಸಮಯ ನಿಗದಿ ಮಾಡಿದೆ. ಪಾದಯಾತ್ರಿಕರು, ದ್ವಿಚಕ್ರ ವಾಹನ ಸವಾರರ ಸುರಕ್ಷತೆ ದೃಷ್ಟಿಯಿಂದ ಕ್ರಮಕೈಗೊಂಡಿರುವ ಈ ಆದೇಶ ಜನವರಿ 25ರಿಂದ ಜಾರಿಗೆ ಬರಲಿದೆ. ಹೀಗಾಗಿ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುವ ಭಕ್ತರು ಜಿಲ್ಲಾಡಳಿತದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಿದ್ದಾರೆ.
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ಬೆಳಗ್ಗೆ ಮಂಡ್ಯ ಜಿಲ್ಲೆಯ ಚೀರನಹಳ್ಳಿ ಮೂಲದ ಪ್ರವೀಣ್ ಎಂಬ ಭಕ್ತನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ತಿಂದ ಘಟನೆ ನಡೆದಿತ್ತು. ಈ ಘಟನೆಯ ಬಳಿಕ ಜಿಲ್ಲಾಡಳಿತವು ತಕ್ಷಣ ಕ್ರಮಕೈಗೊಂಡಿದ್ದು, ಮೊದಲ ಹಂತದಲ್ಲಿ ಸಂಜೆ 6ರಿಂದ ಬೆಳಗ್ಗೆ 6 ಗಂಟೆಯವರೆಗೆ ಪಾದಯಾತ್ರೆಗೆ ನಿರ್ಬಂಧ ವಿಧಿಸಲಾಗಿತ್ತು. ಈ ನಿರ್ಬಂಧವನ್ನು ಜನವರಿ 24ರವರೆಗೆ ಜಾರಿಗೊಳಿಸಲಾಗಿತ್ತು.
ಚಿರತೆ ದಾಳಿ ಬೆನ್ನಲ್ಲೇ ಎಚ್ಚೆತ್ತುಕೊಂಡಿದ್ದ ಜಿಲ್ಲಾಡಳಿತ ಜನವರಿ 24ವರೆಗೆ ಸಂಜೆ 6 ರಿಂದ ಬೆಳಗ್ಗೆ 6ರವರೆಗೆ ಪಾದಯಾತ್ರೆಗೆ ನಿರ್ಬಂಧ ಹೇರಿತ್ತು. ಆದರೆ ಇದೀಗ ಪಾದಯಾತ್ರಿಗರಿ ಜಿಲ್ಲಾಡಳಿತ ಸಮಯದ ಡೈಡ್ಲೈನ್ ನೀಡಿದೆ. ನಾಳೆಯಿಂದ ಬೆಳಗ್ಗೆ 7 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮಾತ್ರ ಪಾದಯಾತ್ರಿಕರಿಗೆ ಹಾಗೂ ದ್ವಿಚಕ್ರ ವಾಹನಕ್ಕೆ ಅವಕಾಶ ನೀಡಲಾಗಿದೆ.
ಹಾಸಿಗೆಗೆ ಪತಿಯನ್ನು ಕಟ್ಟಿಹಾಕಿದ ಪತ್ನಿ, ಅತ್ತೆ ಮಾಡಿದ್ದೇನು?; ವೈರಲ್ ವಿಡಿಯೋ ನೋಡಿ