https://youtube.com/shorts/Dd-eFU1bWK0?si=lKshxhXI_HQZodW-
Subscribe ನ್ಯೂಸಿಕ್ಸ್ ಕನ್ನಡ
newsics.com
ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀವ್ ಗೌಡ ಜೈಲು ಪಾಲಾಗಿದ್ದಾನೆ. ರಾಜೀವ್ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ರಾಜೀವ್ ಗೌಡನನ್ನು ಇಂದು ಮಧ್ಯಾಹ್ನ 3 ಗಂಟೆಗೆ ಶಿಡ್ಲಘಟ್ಟದ ಹೆಚ್ಚುವರಿ ಅಪರ ನ್ಯಾಯಾಧೀಶೆ ಸುಕನ್ಯಾ ಅವರ ಮುಂದೆ ಹಾಜರುಪಡಿಸಲಾಯಿತು. ಈ ವೇಳೆ ಕೋರ್ಟ್ ಆವರಣದಲ್ಲಿ ನೂರಾರು ಬೆಂಬಲಿಗರು ಜಮಾಯಿಸಿದ್ದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪರಿಸ್ಥಿತಿ ಕೈಮೀರದಂತೆ ಪೊಲೀಸರು ಬ್ಯಾರಿಕೇಡ್ಗಳನ್ನು ಅಳವಡಿಸಿ, ಕೆಎಸ್ಆರ್ಪಿ ತುಕಡಿಗಳನ್ನು ನಿಯೋಜಿಸಿದ್ದರು. ಬೆಂಬಲಿಗರು ಜಾಮೀನಿಗಾಗಿ ಪ್ರಾರ್ಥನೆ ಸಲ್ಲಿಸುತ್ತಿದ್ದಾಗ, ರಾಜೀವ್ ಗೌಡ ಕೈಬೀಸುತ್ತಲೇ ಕೋರ್ಟ್ ಒಳಗೆ ಪ್ರವೇಶಿಸಿದ್ದು ಕಂಡುಬಂದಿತು.
ಪೌರಾಯುಕ್ತೆಗೆ ನಿಂದಿಸಿದ್ದ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ರಾಜೀವ್ ಗೌಡ ವಕೀಲರು ಜಾಮೀನು ಪಡೆಯುವ ನಿರೀಕ್ಷೆಯಲ್ಲಿದ್ದರು, ಆದ್ರೆ ರಾಜೀವ್ ಗೌಡಗೆ ಬಿಗ್ ಶಾಕ್ ಎದುರಾಗಿದೆ. ಆರೋಪಿ ರಾಜೀವ್ ಗೌಡ ಪರ ವಕೀಲರು ಒಟ್ಟು ಎರಡು ಜಾಮೀನು ಅರ್ಜಿಗಳನ್ನು ಸಲ್ಲಿಸಿದ್ದರು. ಒಂದು ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಮತ್ತೊಂದು ಪ್ರಕರಣದಲ್ಲಿ ರೆಗ್ಯುಲರ್ ಬೇಲ್ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಆದ್ರೆ, ವಿಚಾರಣೆ ನಡೆಸಿರುವ ನ್ಯಾಯಾಲಯ ರಾಜೀವ್ ಗೌಡನ ಮಧ್ಯಂತರ ಜಾಮೀನು ಅರ್ಜಿ ವಜಾಗೊಳಿಸಿದೆ. ಇದರ ಜೊತೆಗೆ ರೆಗ್ಯುಲರ್ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿದೆ. ಪಿಪಿಗೆ ಇಂದು ಆಕ್ಷೇಪಣೆ ಸಲ್ಲಿಸಲು ಮತ್ತು ಜೊತೆಗೆ ರೆಗ್ಯುಲರ್ ಕೋರ್ಟ್ನಲ್ಲಿ ಕಸ್ಟಡಿಗೂ ಅರ್ಜಿ ಹಾಕಲು ಸೂಚನೆ ನೀಡಿದೆ.