Subscribe ನ್ಯೂಸಿಕ್ಸ್ ಕನ್ನಡ
newsics.com
ಉದ್ಯಮಿ ಮನೆಯಲ್ಲಿದ್ದ 18 ಕೋಟಿ ರೂ. ಚಿನ್ನಾಭರಣ ಕದ್ದು ಮನೆಗೆಲಸದ ದಂಪತಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ದಿನೇಶ್(32) ಮತ್ತು ಅವರ ಪತ್ನಿ ಕಮಲಾ(25) ಆಭರಣ ಕದ್ದ ಆರೋಪಿಗಳು ಎಂದು ಗುರುತಿಸಲಾಗಿದ್ದು, ಪೊಲೀಸರು ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳು ಸುಮಾರು 20 ದಿನಗಳ ಮುನ್ನ ಮನೆ ಕೆಲಸ ಮಾಡುವ ಕೆಲಸಕ್ಕೆ ಸೇರಿದ್ದರು.
ಉದ್ಯಮಿ ಶಿಮಂತ್ ಎಸ್ ಅರ್ಜುನ್(28) ಅವರು ಭಾನುವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಸಂಬಂಧಿಕರೊಬ್ಬರ ಭೂಮಿ ಪೂಜೆಗೆ ತಮ್ಮ ಕುಟುಂಬದೊಂದಿಗೆ ಹೋಗಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಅವರ ಮನೆಯಲ್ಲಿ ಕೆಲಸಕ್ಕಿದ್ದ ದಿನೇಶ್ ಮತ್ತು ಕಮಲಾ ಈ ಕೃತ್ಯ ಎಸಗಿದ್ದಾರೆ.
ದಂಪತಿ ತಮ್ಮ ಸಹಚರರೊಂದಿಗೆ ಕಬ್ಬಿಣದ ರಾಡ್ ಬಳಸಿ ನೆಲ ಮಹಡಿಯಲ್ಲಿರುವ ಕಪಾಟನ್ನು ಮುರಿದು ಸುಮಾರು 10 ಕೆಜಿ ಚಿನ್ನ ಮತ್ತು ವಜ್ರದ ಆಭರಣಗಳನ್ನು ಕದ್ದಿದ್ದಾರೆ.
ಮೊದಲ ಮಹಡಿಯ ಮಲಗುವ ಕೋಣೆಯಲ್ಲಿದ್ದ ಮತ್ತೊಂದು ಲಾಕರ್ ಅನ್ನು ಮುರಿದು, ಅದರಲ್ಲಿದ್ದ ಸುಮಾರು 1.5 ಕೆಜಿ ಚಿನ್ನ, ಸುಮಾರು 5 ಕೆಜಿ ಬೆಳ್ಳಿ ಆಭರಣಗಳು ಮತ್ತು 11.5 ಲಕ್ಷ ರೂಪಾಯಿ ನಗದು ಕಳ್ಳತನ ಮಾಡಿದ್ದಾರೆ.
ಮನೆಯ ಮತ್ತೊಬ್ಬ ಕೆಲಸಗಾರ ಬಾಗಿಲುಗಳು ಮುರಿದಿರುವುದನ್ನು ಗಮನಿಸಿ ಮಧ್ಯಾಹ್ನ 12.30 ರ ಸುಮಾರಿಗೆ ಶಿಮಂತ್ ಅವರಿಗೆ ಮಾಹಿತಿ ನೀಡಿದ್ದಾನೆ .
ಆರೋಪಿಗಳ ಬಂಧನಕ್ಕೆ ಹಲವು ತಂಡಗಳನ್ನು ರಚಿಸಲಾಗಿದೆ. ಹೊರ ರಾಜ್ಯಗಳಲ್ಲಿಯೂ ಕಾರ್ಯಾಚರಣೆ ನಡೆಸಲಾಗುತ್ತಿದೆ. ಹತ್ತಾರು ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ.
ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ನಟಿ ಸಂಜನಾ ಬುರ್ಲಿ; ಹುಡುಗ ಯಾರು?