newsics.com
ಮಂಗಳೂರು: ದಕ್ಷಿಣ ಕನ್ನಡಕ್ಕೆ ತೆರಳಿರುವ ಯಶ್ ಕು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಕುಟುಂಬದ ಜೊತೆ ಭೇಟಿ ನೀಡಿದರು. ಪೂಜೆ ಸಲ್ಲಿಸಿ ಹರಕೆ ತೀರಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನಲ್ಲಿರುವ ಉಜಿರೆಯ ಸೂರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದಾರೆ.
ಇಂದು ಬೆಳಗ್ಗೆ ಪತ್ನಿ ರಾಧಿಕಾ ಹಾಗೂ ಮಕ್ಕಳು ಹಾಗೂ ಟಾಕ್ಸಿಕ್ ಚಲನಚಿತ್ರದ ನಿರ್ಮಾಪಕ, KVN ಪ್ರೊಡಕ್ಷನ್ಸ್ ಸಂಸ್ಥೆಯ ಮುಖ್ಯಸ್ಥ ವೆಂಕಟ್ ಕೆ. ನಾರಾಯಣ್ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಆರೋಗ್ಯ ಸಮಸ್ಯೆ ಹಿನ್ನೆಲೆ ಕುಟುಂಬದ ಮಣ್ಣಿನ ಮೂರ್ತಿ ಮತ್ತು ಮಣ್ಣಿನ ಫಿಲ್ಮ್ ರೀಲ್ ಹರಕೆಯನ್ನು ತೀರಿಸಿದ್ದಾರೆ.
ಯಶ್ ಪಂಚೆ ತೊಟ್ಟು ಸಾಂಪ್ರದಾಯಿಕವಾಗಿ ಕುಟುಂಬ ಸಮೇತ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಯಶ್ ಆಗಮನದ ಸುದ್ದಿ ತಿಳಿದು ಫ್ಯಾನ್ಸ್ ಸೆಲ್ಫಿಗಾಗಿ ಮುಗಿಬಿದ್ದಿದ್ದರು.