newsics.com
ಬೆಂಗಳೂರು: ಮದುವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಹೊಡೆದಾಡಿಕೊಂಡಿದ್ದು, ಗಾಯಗೊಂಡಿದ್ದ ನವ ವಧು ದುರಂತ ಸಾವು ಕಂಡಿದ್ದಾಳೆ.
ಲಿಖಿತ ಶ್ರೀ ಹಾಗೂ ನವೀನ್ ಇಂದು (ಆಗಸ್ಟ್ 07) ಸಪ್ತಪದಿ ತುಳಿದಿದ್ದಾರೆ. ಆದ್ರೆ, ಅದೇನಾಯ್ತೋ ಏನೋ ರೂಮ್ಗೆ ಹೋಗಿ ಇಬ್ಬರೂ ಹೊಡೆದಾಡಿಕೊಂಡಿದ್ದಾರೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ವಧು ಲಿಖಿತ ಶ್ರೀ ಸಾವನ್ನಪ್ಪಿದ್ದಾಳೆ.
ಗಾಯಗೊಂಡಿರುವ ವರನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಈ ಘಟನೆ ನಡೆದಿದ್ದು ಬೇರೆ ದೇಶ, ರಾಜ್ಯದಲ್ಲಿ ಅಲ್ಲ. ಕೋಲಾರ ಜಿಲ್ಲೆಯಲ್ಲಿ ನಡೆದಿದೆ.
ಗಾಯಗೊಂಡಿರುವ ವರ ನವೀನ್ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಆಸ್ಪತ್ರೆಗೆ ರವಾನಿಸಲಾಗಿದೆ.