Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಪೋಷಕರ ಹೊರೆ ಇಳಿಸಿದ ಸರ್ಕಾರ
ಕರ್ನಾಟಕಪ್ರಮುಖ

1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಪೋಷಕರ ಹೊರೆ ಇಳಿಸಿದ ಸರ್ಕಾರ

Share
3 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಕರ್ನಾಟಕದ 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ವಿದ್ಯಾ ವಿಕಾಸ ಯೋಜನೆಯಡಿ ಶಾಲಾ ಮಕ್ಕಳಿಗೆ ಪಠ್ಯಪುಸ್ತಕದ ಜೊತೆಗೆ ನೋಟ್ ಬುಕ್ ವಿತರಣೆಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ.
2026 -27ನೇ ಸಾಲಿನ 1ರಿಂದ 10ನೇ ತರಗತಿಯವರೆಗೆ ಓದುತ್ತಿರುವ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ನೀಡಲು ಅನುಮೋದನೆ ನೀಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿ ಶುಭಮಂಗಳಾ ಅವರು ಆದೇಶ ಹೊರಡಿಸಿದ್ದಾರೆ. ಇದರಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಸುಮಾರು 61 ಲಕ್ಷ ಮಕ್ಕಳಿಗೆ ಅನುಕೂಲವಾಗಲಿದೆ.ಈ ಮೂಲಕ ಮೊದಲ ಬಾರಿಗೆ 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯ ಪುಸ್ತಕದ ಜೊತೆಗೆ ನೋಟ್‌ಬುಕ್ ಸಹ ವಿತರಣೆಗೆ ಮುಂದಾಗಿದೆ.
ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1ರಿಂದ 10ನೇ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ, ಅಭ್ಯಾಸ ಪುಸ್ತಕ ಹಾಗೂ 1ರಿಂದ 12ನೇ ತರಗತಿಯವರೆಗೆ ದಿನಚರಿ ಪುಸ್ತಕ ವಿತರಣೆ ಸಂಬಂಧ ಶಿಕ್ಷಣ ಇಲಾಖೆಯು 30 ಕೋಟಿ 83 ಲಕ್ಷದ 25 ಸಾವಿರ ಹಣದ ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸಿತ್ತು. ಇದೀಗ ಶಿಕ್ಷಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆ ಸರ್ಕಾರ ಸಹ ಒಪ್ಪಿಗೆ ಸೂಚಿಸಿದ್ದು, 290.46 ಕೋಟಿ ರೂ ಅನುದಾನವನ್ನು ಶಾಲಾ ಶಿಕ್ಷಣ ಇಲಾಖೆಗೆ ಗ್ರೀನ್ ಸಿಗ್ನಲ್ ನೀಡಿದೆ. ಇದರ ಬೆನ್ನಲ್ಲೇ ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲೇ ಮಕ್ಕಳಿಗೆ ಪಠ್ಯಪುಸ್ತಕ ವಿತರಿಸಲು ತಯಾರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಶುಭ ಮಂಗಳ ಆದೇಶ ಹೊರಡಿಸಿದ್ದಾರೆ. ಇನ್ನು ಪಠ್ಯ ಪುಸ್ತಕದ ಕಾಗದ ಮತ್ತು ಮುದ್ರಣ ಗುಣಮಟ್ಟ ರಾಜಿ ಆಗೋ ಹಾಗಿಲ್ಲ . ಹೆಚ್ಚುವರಿ ಪುಸ್ತಕಕ್ಕೆ ಬೇಡಿಕೆ ಸಲ್ಲಿಸಿ ಕಳ್ಳಾಟ ಆಡೋ ಹಾಗಿಲ್ಲ . ಸರ್ಕಾರದ ಹಣ ದುರುಪಯೋಗ ಮಾಡಿದ್ರೆ ಕಠಿಣ ಕ್ರಮ ಎಂದು ಆದೇಶದಲ್ಲಿ ಎಚ್ಚರಿಕೆ ನೀಡಿದ್ದಾರೆ.
ಇನ್ನು 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಸರ್ಕಾರದ ಕಡೆಯಿಂದಲೇ ಪಠ್ಯ ಪುಸ್ತಕ ಹಾಗೂ ನೋಟ್ ಬುಕ್ ಉಚಿತವಾಗಿ ನೀಡುವುದರಿಂದ ಪೋಷಕರ ಹೊರೆ ತಪ್ಪಲಿದೆ. 1ರಿಂದ 10ನೇ ತರಗತಿ ಮಕ್ಕಳಿಗೆ ಶಾಲೆಯಲ್ಲಿ ಪಠ್ಯ ಪುಸ್ತಕ ನೀಡಲಾಗುತ್ತಿತ್ತಾದರೂ ಪೋಷಕರು ನೋಟ್ ಬುಕ್ ಕೊಡಿಸಬೇಕಿತ್ತು. ಇನ್ನೂ 11 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೂ ಸಹ ಪುಸ್ತಕ ನೀಡುತ್ತಿರುವುದರಿಂದ ಪೋಷಕರ ಹೊರೆ ಕಡಿಮೆಯಾಗಲಿದೆ.
ಆದೇಶದಲ್ಲೇನಿದೆ?
ಸರ್ಕಾರಿ ಶಾಲೆಗಳ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ದ್ವಿಭಾಷಾ ಬಾಲ ಚೇತನ ಚಟುವಟಿಕೆ ಪುಸ್ತಕಗಳು, ಸರ್ಕಾರಿ ಶಾಲೆಗಳ 4ರಿಂದ 9ನೇ ತರಗತಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಅಭ್ಯಾಸ ಪುಸ್ತಕ ಮತ್ತು ಸರ್ಕಾರಿ ಶಾಲಾ ಕಾಲೇಜುಗಳ ಪೂರ್ವ ಪ್ರಾಥಮಿಕ ತರಗತಿಗಳಿಂದ 12ನೇ ತರಗತಿಯವರೆಗೆ ದಿನಚರಿ ಪುಸ್ತಕ ಮತ್ತು 1ರಿಂದ 10ನೇ ತರಗತಿಯವರೆಗೆ ಮೌಲ್ಯ ಶಿಕ್ಷಣ ಪುಸ್ತಕಗಳನ್ನು ವಿತರಿಸಲು ಸೂಚಿಸಲಾಗಿದೆ.
ಕೆಟಿಪಿಪಿ ಕಾಯ್ದೆ 1999ರ ಅಡಿ ರೂಪಿಸಿದ ನಿಯಮಗಳಂತೆ ಪಾರದರ್ಶಕ ಟೆಂಡರ್ ಕರೆದು ಕರ್ನಾಟಕ ಪುಸ್ತಕ ಸಂಘದ ಮೂಲಕ ಮುದ್ರಿಸಿ ವಿತರಿಸುವಂತೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರಿಗೆ ಸೂಚಿಸಲಾಗಿದೆ. ಒಟ್ಟು 264.62 ಕೋಟಿ ವೆಚ್ಚದಲ್ಲಿ ವಿದ್ಯಾ ವಿಕಾಸ ಯೋಜನೆ ಅಡಿ ಪುಸ್ತಕಗಳ ವಿತರಣೆಗೆ ಅನುಮೋದನೆ ನೀಡಲಾಗಿದೆ. ಸಮಗ್ರ ಶಿಕ್ಷಣ ಕರ್ನಾಟಕದಡಿ ಹೊಸದಾಗಿ ಅನುಷ್ಠಾನಗೊಳಿಸುವ ಕಾರ್ಯಕ್ರಮಗಳಿಗೆ 25.841 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ. ಶೈಕ್ಷಣಿಕ ವರ್ಷದ ಆರಂಭದಲ್ಲೇ ಪಠ್ಯಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಬೇಕು. ಎಸ್‌ಎಟಿಎಸ್ ಮೂಲಕ ಶಾಲೆಗಳಿಂದ ಪಠ್ಯಪುಸ್ತಕಗಳ ಬೇಡಿಕೆಯ ಮಾಹಿತಿ ಪಡೆದು ಎಲ್ಲಾ ವಿವರ ದಾಖಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ಸಂಶಯದ ಭೂತಕ್ಕೆ ಪತ್ನಿ ತಲೆ ಬೋಳಿಸಿದ ಪತಿ

TAGGED:Good news for students from class 1 to 12government reduces burden on parents
Share This Article
Facebook Twitter Copy Link Print
Previous Article ಸಂಶಯದ ಭೂತಕ್ಕೆ ಪತ್ನಿ ತಲೆ ಬೋಳಿಸಿದ ಪತಿ
Next Article ಸರ್ಕಾರಿ ನೌಕರರಿಗೆ ಆರೋಗ್ಯ ಸಂಜೀವಿನಿ’ ಯೋಜನೆ ಬಗ್ಗೆ ಮಾರ್ಗಸೂಚಿ ಬಿಡುಗಡೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?