Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇಂಗ್ಲೆಂಡ್ ಮಣಿಸಿ ಟ್ರೋಫಿ ಗೆದ್ದ ಭಾರತ
ದೇಶಪ್ರಮುಖ

ಇಂಗ್ಲೆಂಡ್ ಮಣಿಸಿ ಟ್ರೋಫಿ ಗೆದ್ದ ಭಾರತ

Share
3 Min Read
SHARE

https://youtube.com/shorts/kv9in5qxZnE?si=xMEQPbw5L2rTAx6o

Subscribe ನ್ಯೂಸಿಕ್ಸ್ ಕನ್ನಡ

newsics.com

ಹರಾರೆ ಕ್ರೀಡಾಂಗಣದಲ್ಲಿ ನಡೆದ ಅಂಡರ್ 19 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ 100 ರನ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಆರನೇ ಬಾರಿಗೆ ಟ್ರೋಫಿಯನ್ನು ಎತ್ತಿಹಿಡಿದಿದೆ.

ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆರಿಸಿಕೊಂಡು ವೈಭವ್ ಸೂರ್ಯವಂಶಿ ದಾಖಲೆಯ ಶತಕದ ನೆರವಿನಿಂದ 50 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಬರೋಬ್ಬರಿ 411 ರನ್ ಕಲೆಹಾಕಿ ಇಂಗ್ಲೆಂಡ್‌ಗೆ 412 ರನ್‌ಗಳ ಕಠಿಣ ಗುರಿಯನ್ನು ನೀಡಿತು.

ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಇಂಗ್ಲೆಂಡ್ 40.2 ಓವರ್‌ಗಳಲ್ಲಿ 311 ರನ್‌ಗೆ ಆಲ್‌ಔಟ್ ಆಗಿದೆ.
ಭಾರತದ ಇನ್ನಿಂಗ್ಸ್: ಸೆಮಿಫೈನಲ್ ಪಂದ್ಯದಲ್ಲಿ ಶತಕ ಬಾರಿಸಿದ್ದ ಆರನ್ ಜಾರ್ಜ್ ಕೇವಲ 9 ರನ್‌ಗೆ ಔಟ್ ಆಗಿ ವಿಕೆಟ್ ಒಪ್ಪಿಸಿದರು. ಹೀಗೆ ಆರಂಭಿಕ ಆಘಾತ ಕಂಡ ಭಾರತಕ್ಕೆ ಮತ್ತೋರ್ವ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ಅಬ್ಬರಿಸಿ ಬೊಬ್ಬಿರಿದು ಆಸರೆಯಾದರು. ತನ್ನ ಇನ್ನಿಂಗ್ಸ್ ಉದ್ದಕ್ಕೂ ಬೌಂಡರಿ ಹಾಗೂ ಸಿಕ್ಸರ್ ಸುರಿಮಳೆಯನ್ನೇ ಸುರಿಸಿದ ವೈಭವ್ ಸೂರ್ಯವಂಶಿ ಐಸಿಸಿ 50 ಓವರ್‌ಗಳ ಟೂರ್ನಿಗಳ ಫೈನಲ್‌ನಲ್ಲಿ ಅತಿ ಬೇಗನೆ ಶತಕ ಬಾರಿಸಿದ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡರು. ಕೇವಲ 55 ಎಸೆತಗಳಿಗೆ ತನ್ನ ಶತಕವನ್ನು ಪೂರೈಸಿದ ವೈಭವ್ 80 ಎಸೆತಗಳಲ್ಲಿ 15 ಸಿಕ್ಸರ್ ಹಾಗೂ 15 ಬೌಂಡರಿಗಳನ್ನು ಬಾರಿಸಿ ಒಟ್ಟು 175 ರನ್ ಚಚ್ಚಿದರು. ವೈಭವ್‌ ಜತೆ ಸೇರಿ ಎರಡನೇ ವಿಕೆಟ್‌ಗೆ ಉತ್ತಮ ಜತೆಯಾಟವಾಡಿದ ನಾಯಕ ಆಯುಷ್ ಮ್ಹಾತ್ರೆ 53 ರನ್ ಬಾರಿಸಿದರು. ಇನ್ನುಳಿದಂತೆ ವೇದಾಂತ್ ತ್ರಿವೇದಿ 32, ವಿಹಾನ್ ಮಲ್ಹೋತ್ರ 30, ಅಭೀಜ್ಞಾನ್ ಕುಂದು 40, ಆರ್‌ಎಸ್‌ ಅಂಬರೀಶ್ 18, ಖಿಲಾನ್ ಪಟೇಲ್ 3, ಹೆನಿಲ್ ಪಟೇಲ್ 5, ಕನಿಷ್ಕ್ ಚೌಹಾಣ್ ಅಜೇಯ 37 ರನ್ ಹಾಗೂ ಯಾವುದೇ ಎಸೆತ ಎದುರಿಸದ ದೀಪೇಶ್ ದೇವೇಂದ್ರನ್ ಅಜೇಯರಾಗಿ ಉಳಿದರು.
ಇಂಗ್ಲೆಂಡ್ ಪರ ಜೇಮ್ಸ್ ಮಿಂಟೊ ಮೂರು ವಿಕೆಟ್, ಸೆಬಾಸ್ಟಿಯನ್ ಮಾರ್ಗನ್ ಮತ್ತು ಅಲೆಕ್ಸ್ ಗ್ರೀನ್ ತಲಾ ಎರಡು ವಿಕೆಟ್ ಹಾಗೂ ಮ್ಯಾನಿ ಲಮ್ಸ್‌ಡೆನ್ ಒಂದು ವಿಕೆಟ್ ಪಡೆದರು.
ಇಂಗ್ಲೆಂಡ್ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಜೋಸೆಫ್ ಮೂರ್ಸ್ 17 ರನ್‌ಗೆ ವಿಕೆಟ್ ಒಪ್ಪಿಸಿದ ಕಾರಣ ತಂಡ 19 ರನ್‌ಗೆ ತನ್ನ ಮೊದಲ ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತು. ಹೀಗೆ ಆರಂಭದಲ್ಲೇ ಕುಸಿದ ತಂಡಕ್ಕೆ ಮತ್ತೋರ್ವ ಆರಂಭಿಕ ಆಟಗಾರ ಬೆನ್ ಡಾಕಿನ್ಸ್ ಹಾಗೂ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬೆನ್ ಮೇಯ್ಸ್ 74 ರನ್‌ಗಳ ಜತೆಯಾಟವನ್ನಾಡುವ ಮೂಲಕ ತುಸು ಸುಧಾರಣೆ ತಂದರು. ಬೆನ್ ಡಾಕಿನ್ಸ್ 66 ರನ್ ಬಾರಿಸಿದರೆ, ಬೆನ್ ಮೇಯ್ಸ್ 45 ರನ್ ಗಳಿಸಿದರು. ಥಾಮಸ್ 31 ರನ್ ಬಾರಿಸಿದ್ದಾಗ ವಿಕೆಟ್ ಒಪ್ಪಿಸಿದರು. ಈ ಮೂಲಕ ಇಂಗ್ಲೆಂಡ್ ಕೇವಲ 174 ರನ್‌ಗೆ 4 ವಿಕೆಟ್ ಕಳೆದುಕೊಂಡಿತು. ಬೆನ್ನಲ್ಲೇ ರಾಫಿ ಆಲ್ಬರ್ಟ್ ಡಕ್‌ಔಟ್, ಫರ್ಹಾನ್ ಅಹ್ಮದ್ 1 ಹಾಗೂ ಸೆಬಾಸ್ಟಿಯನ್ ಮಾರ್ಗನ್ ಡಕ್‌ಔಟ್ ಆದರು. ಅಲ್ಲಿಗೆ ಇಂಗ್ಲೆಂಡ್ 177 ರನ್‌ಗೆ 7 ವಿಕೆಟ್ ಕಳೆದುಕೊಂಡು ತೀರ ಸಂಕಷ್ಟಕ್ಕೆ ಸಿಲುಕಿತು. ಒಂದೆಡೆ ವಿಕೆಟ್ ಬೀಳುತ್ತಿದ್ದರೆ ಮತ್ತೊಂದೆಡೆ ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಕಾಲೆಬ್ ಫಾಲ್ಕನರ್ ಏಕಾಂಗಿ ಹೋರಾಟ ನಡೆಸಿ 67 ಎಸೆತಗಳಲ್ಲಿ 115 ರನ್ ಬಾರಿಸಿದರು. ಇನ್ನುಳಿದಂತೆ ಜೇಮ್ಸ್ ಮಿಂಟೊ 28, ಮ್ಯಾನ್ನಿ ಲಮ್ಸ್‌ಡೆನ್ 3 ರನ್ ಹಾಗೂ ಯಾವುದೇ ಎಸೆತ ಎದುರಿಸದ ಅಲೆಕ್ಸ್ ಗ್ರೀನ್ ಅಜೇಯರಾಗಿ ಉಳಿದರು.
ಭಾರತದ ಪರ ಆರ್‌ಎಸ್ ಅಂಬರೀಶ್ ಮೂರು ವಿಕೆಟ್, ದೀಪೇಶ್ ದೇವೇಂದ್ರನ್ ಎರಡು ವಿಕೆಟ್ ಹಾಗೂ ಕನಿಷ್ಕ್ ಚೌಹಾಣ್ ತಲಾ ಎರಡು ವಿಕೆಟ್ ಮತ್ತು ಖಿಲಾನ್ ಪಟೇಲ್ ಹಾಗೂ ನಾಯಕ ಆಯುಷ್ ಮ್ಹಾತ್ರೆ ಒಂದು ವಿಕೆಟ್ ಪಡೆದರು.

ಯತೀಂದ್ರ ಅವರೇ ನಮ್ಮ ಹೈಕಮಾಂಡ್, ಅವರ ಮಾತನ್ನು ಗೌರವದಿಂದ ಸ್ವೀಕರಿಸುತ್ತೇವೆ: ಡಿಕೆಶಿ ವ್ಯಂಗ್ಯ

TAGGED:India beat England to win the trophy
Share This Article
Facebook Twitter Copy Link Print
Previous Article ಯತೀಂದ್ರ ಅವರೇ ನಮ್ಮ ಹೈಕಮಾಂಡ್, ಅವರ ಮಾತನ್ನು ಗೌರವದಿಂದ ಸ್ವೀಕರಿಸುತ್ತೇವೆ: ಡಿಕೆಶಿ ವ್ಯಂಗ್ಯ
Next Article ಬಿಗ್ ಬಾಸ್ ವಿನ್ನರ್ ಗಿಲ್ಲಿಗೆ ಸಂಕಷ್ಟ, ದೂರು ದಾಖಲು

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?