https://youtube.com/shorts/1QBsT4fM7Oc?si=2UevBtM7l5058Pmp
Subscribe ನ್ಯೂಸಿಕ್ಸ್ ಕನ್ನಡ
newsics.com
ಬೆಂಗಳೂರು: ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ ತಯಾರಿಸುವ ಉತ್ಪನ್ನಗಳ ಮಾರುಕಟ್ಟೆ ಬಲವರ್ಧನೆಯ ಅಂಗವಾಗಿ ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು 2 ವರ್ಷಗಳ ಅವಧಿಗೆ ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಳ್ಳಲಾಗಿದೆ.ಅವರ ಈ ಕೆಲಸವು ಮಂಗಳವಾರದಿಂದ ವಿಧ್ಯುಕ್ತವಾಗಿ ಆರಂಭವಾಗಿದೆ.
ಖಾಸಗಿ ಹೋಟೆಲ್ನಲ್ಲಿ ಮಂಗಳವಾರ ಕೆಎಸ್ಡಿಎಲ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ನೂತನ ಪ್ರಚಾರ ರಾಯಭಾರಿ ತಮನ್ನಾ ಅವರು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಕೆಎಸ್ಡಿಎಲ್ ಅಪ್ಪಾಜಿ ಸಿ.ಎಸ್.ನಾಡಗೌಡರ ಸಮ್ಮುಖದಲ್ಲಿ ಮೈಸೂರು ಸ್ಯಾಂಡಲ್ ಸೋಪ್ನ ವಿನೂತನ ಪ್ಯಾಕ್ ಸೇರಿ ಸೌಂದರ್ಯ ವರ್ಧಕ, ಗೃಹ ಬಳಕೆಯ 57 ಉತ್ಪನ್ನಗಳನ್ನು ಬಿಡುಗಡೆ ಮಾಡಿದರು.
ಇದಕ್ಕೂ ಮುನ್ನ ತಮನ್ನಾ ಅವರು ಬೆಂಗಳೂರಿನ ಮೈಸೂರು ಸ್ಯಾಂಡಲ್ ಸೋಪ್ ಕಾರ್ಖಾನೆಗೆ ಭೇಟಿ ನೀಡಿ ತಮ್ಮ ಜವಾಬ್ದಾರಿಯನ್ನು ಅಧಿಕೃತವಾಗಿ ಆರಂಭಿಸಿದರು.