https://youtube.com/shorts/PRG7YTSZHd8?si=BMsmmRTf3CzVSrft
Subscribe ನ್ಯೂಸಿಕ್ಸ್ ಕನ್ನಡ
newsics.com
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಹೈಕೋರ್ಟ್ ಶಾಸಕ ಭೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿತ್ತು.
ಅದರ ಬೆನ್ನಲ್ಲೆ ಅವರು ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ಇಂದು ಸುಪ್ರೀಂ ಕೋರ್ಟ್ ಸಹ ಭೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಗೊಳಿಸಿದೆ. ಇದೀಗ ಶಾಸಕ ಭೈರತಿ ಬಸವರಾಜ್ ಅವರನ್ನು ಬಂಧಿಸಲು ಸಿಐಡಿ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದರು.
ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗುತ್ತಿದ್ದಂತೆ ಶಾಸಕ ಭರತಿ ಬಸವರಾಜ್ ದುಬೈನಲ್ಲಿ ಇದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಯಾವುದೇ ಕ್ಷಣದಲ್ಲಿ ಶಾಸಕ ಭೈರತಿ ಬಸವರಾಜ್ ಶರಣ ಗತಿ ಆಗುವ ಸಾಧ್ಯತೆ ಇದೆ. ಹಾಗಾಗಿ ಮುಂಜಾಗ್ರತ ಕ್ರಮವಾಗಿ ಬೆಂಗಳೂರಿನ ಸಿಐಡಿ ಕಚೇರಿ ಬಳಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.