https://youtube.com/shorts/74VSpekXhn4?si=vijWxjVUFibUVb68
Subscribe ನ್ಯೂಸಿಕ್ಸ್ ಕನ್ನಡ
newsics.com
ಚಿಕ್ಕಮಗಳೂರು: ಟಿವಿ ನೋಡುವುದು ಕಡಿಮೆ ಮಾಡು ಅಂತಾ ತಾಯಿ ಬೈದಿದ್ದಕ್ಕೆ ಮನನೊಂದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದಿದೆ.
ಮೃತಳನ್ನು ಏಳನೇ ತರಗತಿ ವಿದ್ಯಾರ್ಥಿನಿ ಸುಪ್ರಿತಾ ಎಂದು ಗುರುತಿಸಲಾಗಿದೆ. ಕೆಲಸಕ್ಕೆ ಹೋಗಿದ್ದ ತಾಯಿ ಮಧ್ಯಾಹ್ನ ಊಟಕ್ಕೆ ಮನೆಗೆ ಬಂದಿದ್ದರು. ಯಾವುದರ ಕಡೆ ಗಮನ ಇಲ್ಲ, ಕೇವಲ ಟಿವಿ ಮಾತ್ರ ನೋಡುತ್ತಿರು, ಓದಬೇಡು ಎಂದಿದ್ದಾರೆ. ಬಿದ್ದ ಅನ್ನ ಎಲ್ಲವನ್ನೂ ಕ್ಲೀನ್ ಮಾಡಲು ಸೂಚಿಸಿದ್ದಾರೆ. ತೀವ್ರ ನೋವಿನಿಂದ ಚೆಲ್ಲಿದ ಅನ್ನ ತೆಗೆದು ಕ್ಲೀನ್ ಮಾಡಿದ್ದಾಳೆ. ಬಳಿಕ ತಾಯಿ ಜೊತೆ ಮಗಳು ಸುಪ್ರೀತಾ ಮಾತನಾಡಲೇ ಇಲ್ಲ.
ತಾಯಿ ಕೆಲಸಕ್ಕೆ ಹೋದ ಬೆನ್ನಲ್ಲೇ ಬಾಲಕಿ ಸುಪ್ರಿತಾ ತನ್ನದೇ ವೇಲ್ ನಿಂದ ಮನೆಯ ಮೇಲ್ಛಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ವಿಷಯ ತಿಳಿದು ಮನೆಗೆ ಬಂದ ತಾಯಿ ಕೂಡಲೇ ಆಕೆಯನ್ನ ಆಸ್ಪತ್ರೆಗೆ ಕರೆದೊಯ್ದರು ಬಾಲಕಿ ಸಾವನ್ನಪ್ಪಿದ್ದಾಳೆ.
ಮೃತ ಬಾಲಕಿ ತಾಯಿ ಸರೋಜ ಗಂಡನಿಂದ ಬೇರೆಯಾಗಿ ಬೇರೆ ವಾಸವಿದ್ದಳು. ಹಿರಿಯ ಮಗಳು ತಾಯಿ ಜೊತೆ ಇದ್ದರೆ, ಕಿರಿಯ ಮಗಳು ತಂದೆ ಜೊತೆ ಇದ್ದಳು. ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
https://www.newsics.com/2026/02/16/are-robots-driving-cars-in-a-dark-factory/