Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 6 ಕೋಟಿ ಆಸ್ತಿಗಾಗಿ ಹೆತ್ತ ತಂದೆಯನ್ನೇ ಕೊಲೆಗೈದ ಪಾಪಿ ಮಕ್ಕಳು
ಕರ್ನಾಟಕಪ್ರಮುಖ

6 ಕೋಟಿ ಆಸ್ತಿಗಾಗಿ ಹೆತ್ತ ತಂದೆಯನ್ನೇ ಕೊಲೆಗೈದ ಪಾಪಿ ಮಕ್ಕಳು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಜಗತ್ತಿನಲ್ಲಿ ಕೆಟ್ಟ ಮಕ್ಕಳು ಇರ್ತಾರೆ ಆದ್ರೆ ಕೆಟ್ಟ ತಂದೆ-ತಾಯಿ ಇರಲ್ಲ ಎನ್ನುವುದು ಅಕ್ಷಶಃ ಸತ್ಯ… ಆಸ್ತಿ ವಿಚಾರಕ್ಕೆ ಅಣ್ಣ-ತಮ್ಮಂದಿರು ಶತ್ರುಗಳಂತೆ ಹೊಡೆದಾಡುವುದನ್ನು ನೋಡಿರುತ್ತೀರಿ ಆದರೆ ಆಸ್ತಿ ವಿಚಾರಕ್ಕೆ ತಂದೆಯನ್ನೇ ಮಕ್ಕಳು ಕೊಂದಿದ್ದಾರೆ.

6 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವಿಚಾರಕ್ಕೆ ಜಗಳ ತೆಗೆದು, ಹೆತ್ತ ತಂದೆಯನ್ನೇ ಇಬ್ಬರು ಮಕ್ಕಳು ಕೊಲೆ ಮಾಡಿರುವ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ದೂಪನಹಳ್ಳಿಯಲ್ಲಿ ನಡೆದಿದೆ.

ಬಿಎಂಟಿಸಿ ನಿವೃತ್ತ ಕಂಡಕ್ಟರ್ ಆಗಿದ್ದ ಮುನಿಕೃಷ್ಣ ಅವರೇ ಮಕ್ಕಳ ಕೈಯಲ್ಲಿ ಕೊಲೆ ದುರ್ದೈವಿ. ಘಟನೆಗೆ ಸಂಬಂಧಿಸಿದಂತೆ ಹಿರಿಯ ಮಗ ಮೋಹನ್ ಕುಮಾರ್‌ನನ್ನು ಇಂದಿರಾನಗರ ಪೊಲೀಸರು ಬಂಧಿಸಿದ್ದು, ಎರಡನೇ ಮಗ ಗಜೇಂದ್ರ ತಲೆಮರೆಸಿಕೊಂಡಿದ್ದಾನೆ.

ಮೃತ ಮುನಿಕೃಷ್ಣ ಅವರು ಬಿಎಂಟಿಸಿಯಲ್ಲಿ ಕಂಡಕ್ಟರ್ ಆಗಿ ಸೇವೆ ಸಲ್ಲಿಸಿ 2018ರಲ್ಲಿ ನಿವೃತ್ತರಾಗಿದ್ದರು. ಇವರು ದೂಪನಹಳ್ಳಿಯಲ್ಲಿ ಸುಮಾರು 6 ಕೋಟಿ ಮೌಲ್ಯದ ಮೂರು ಕಟ್ಟಡಗಳನ್ನು ಹೊಂದಿದ್ದರು. ಈ ಆಸ್ತಿಯನ್ನು ಅವರು ತಮ್ಮ ಸ್ವಂತ ಮಕ್ಕಳ ಹೆಸರಿಗೆ ಬರೆಯದೆ, ಮೊಮ್ಮಕ್ಕಳು ಮತ್ತು ತಮ್ಮ ಅಣ್ಣನ ಮಕ್ಕಳ ಹೆಸರಿಗೆ ‘ವಿಲ್’ ಮಾಡಿದ್ದರು. ಮೂರು ಕಟ್ಟಡಗಳ ಪೈಕಿ ಒಂದನ್ನು ಅಣ್ಣನ ಮಕ್ಕಳ ಹೆಸರಿಗೆ ಬರೆದಿದ್ದರು.

‘ನೀನು ಸಂಪಾದಿಸಿ, ನಿನ್ನ ಅಣ್ಣನ ಮಕ್ಕಳ ಹೆಸರಿಗೆ ಯಾಕೆ ವಿಲ್ ಮಾಡಿದೆ? ಎಂದು ಮಕ್ಕಳಾದ ಮೋಹನ್ ಮತ್ತು ಗಜೇಂದ್ರ ತಂದೆಯ ಜೊತೆ ನಿರಂತರವಾಗಿ ಜಗಳವಾಡುತ್ತಿದ್ದರು. ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯುವಂತೆ ಒತ್ತಾಯಿಸುತ್ತಿದ್ದರು. ಇದೇ ವಿಚಾರವಾಗಿ ತಂದೆ ಮತ್ತು ಮಕ್ಕಳ ನಡುವೆ ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ಹೋಗಿದೆ.

ಈ ವೇಳೆ ಮಕ್ಕಳಿಬ್ಬರು ಸೇರಿ ತಂದೆಯ ಮೇಲೆ ಕಬ್ಬಿಣದ ರಾಡ್ ಮತ್ತು ಬ್ಯಾಟ್‌ನಿಂದ ಹಲ್ಲೆ ನಡೆಸಿದ್ದಾರೆ. ಆಗ ಮಕ್ಕಳನ್ನು ಬೆದರಿಸುವ ಉದ್ದೇಶದಿಂದ ಮುನಿಕೃಷ್ಣ ಮನೆಯಲ್ಲಿದ್ದ ಚಾಕು ತಂದಿದ್ದಾರೆ. ಆದರೆ, ರೊಚ್ಚಿಗೆದ್ದ ಮಗ ಮೋಹನ್, ತಂದೆಯ ಕೈಯಲ್ಲಿದ್ದ ಚಾಕುವನ್ನೇ ಕಸಿದುಕೊಂಡು ಅವರಿಗೇ ಇರಿದು ಕೊಲೆ ಮಾಡಿದ್ದಾನೆ. ಘಟನೆ ಸಂಬಂಧ ಇಂದಿರಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

https://www.newsics.com/2026/02/17/couple-commits-suicide-writes-death-note-saying-son-is-our-world/

 

TAGGED:Sinful children who murdered their own father for a property worth Rs 6 crore
Share This Article
Facebook Twitter Copy Link Print
Previous Article ಮಗನೇ ನಮ್ಮ ಪ್ರಪಂಚ ಎಂದು ಡೆತ್ ನೋಟ್ ಬರೆದಿಟ್ಟು ದಂಪತಿ ಆತ್ಮ*ಹತ್ಯೆ
Next Article ರಾಜ್ಯದ ಪ್ರತಿಷ್ಟಿತ ವಿವಿ ಹಾಸ್ಟೆಲ್’ನ 14ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು !

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?