https://youtube.com/shorts/lXpfR5AMayg?si=7veIYlHbfMC24bIz
Subscribe ನ್ಯೂಸಿಕ್ಸ್ ಕನ್ನಡ
newsics.com
2023ರ ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ನಾಯಕ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರು ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಇಂದು ರದ್ದುಗೊಳಿಸಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ಶೇ. 40ರಷ್ಟು ಕಮಿಷನ್ ಹಾಗೂ ಸರಣಿ ಭ್ರಷ್ಟಾಚಾರ ಆರೋಪ ಮಾಡಿ ಪತ್ರಿಕೆಗಳಿಗೆ ಜಾಹೀರಾತು ನೀಡಿದ್ದ ಕಾಂಗ್ರೆಸ್. ಆ ಜಾಹೀರಾತುಗಳನ್ನು ಎಕ್ಸ್ ಪೋಸ್ಟ್ ಮೂಲಕ ರಾಹುಲ್ ಗಾಂಧಿ ಹಂಚಿಕೊಂಡಿದ್ದರು.
ಆಧಾರಹಿತ ಜಾಹೀರಾತುಗಳನ್ನು ಹಂಚಿಕೊಂಡು ಪ್ರಚಾರ ಮಾಡ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕರು ರಾಹುಲ್ ಗಾಂಧಿ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್ನಲ್ಲಿ ಮಾನಹಾನಿ ಪ್ರಕರಣ ಹೂಡಿದ್ದರು. ಅದನ್ನು ರದ್ದು ಪಡಿಸುವಂತೆ ಕೋರಿ ರಾಹುಲ್ ಪರ ವಕೀಲರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ರಾಹುಲ್ ಗಾಂಧಿ ಅರ್ಜಿಯನ್ನು ಪುರಸ್ಕರಿಸಿರುವ ಹೈಕೋರ್ಟ್ನ ನ್ಯಾ.ಸುನೀಲ್ ದತ್ತ ಯಾದವ್ ನೇತೃತ್ವದ ಪೀಠ ಅವರ ವಿರುದ್ಧದ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.
ದೇಹದಲ್ಲಿ ಈ ಅಂಗ ಹೆಚ್ಚು ಕೆಲಸ ಮಾಡುತ್ತೆ? 99% ಜನರಿಗೆ ಈ ವಿಚಾರ ತಿಳಿದಿಲ್ಲ