https://youtube.com/shorts/tAQS6h_SZWA?si=vAoxcVAHQglCsru5
Subscribe ನ್ಯೂಸಿಕ್ಸ್ ಕನ್ನಡ
newsics.com
ಬೆಂಗಳೂರು: ವೇತನ ಪರಿಷ್ಕರಣೆ ಮತ್ತು ಬಾಕಿ ವೇತನ ಪಾವತಿಗೆ ಒತ್ತಾಯಿಸಿ ಸಾರಿಗೆ ನೌಕರರು ಗುರುವಾರ (ಫೆಬ್ರವರಿ 19) ‘ಬೆಂಗಳೂರು ಚಲೋ’ ಪ್ರತಿಭಟನೆ ನಡೆಸಲಿದ್ದು, ರಾಜ್ಯಾದ್ಯಂತ ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ನಿಗಮ (ಬಿಎಂಟಿಸಿ), ಎನ್ಡಬ್ಲ್ಯೂಕೆಆರ್ಟಿಸಿ ನೌಕರರು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ ಎಂದು ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘ ತಿಳಿಸಿದೆ.
ಈ ಮಧ್ಯೆ, ವೇತನ ಪರಿಷ್ಕರಣೆ ಹಾಗೂ ಹಿಂಬಾಕಿ ವೇತನ ನೀಡುವಂತೆ ಕಳೆದ ಎರಡು ವರ್ಷಗಳಿಂದ ಕೈಗೊಂಡಿದ್ದ ಸಾರಿಗೆ ನೌಕರರ ಹೋರಾಟಕ್ಕೆ ಬಾಗಶಃ ಪ್ರತಿಫಲ ದೊರೆತಿದೆ.
38 ತಿಂಗಳ ಹಿಂಬಾಕಿ ವೇತನ ಬದಲಿಗೆ 26 ತಿಂಗಳ ಹಿಂಬಾಕಿ ವೇತನ ನೀಡಲು ರಾಜ್ಯ ಸರ್ಕಾರ ಸಮ್ಮತಿಸಿದೆ. ಅದೇ ರೀತಿ 2024ರಿಂದ ಆಗಬೇಕಿದ್ದ ವೇತನ ಪರಿಷ್ಕರಣೆಯನ್ನ 2025ರ ಏಪ್ರಿಲ್ ನಿಂದ ನೀಡಲು ನಿರ್ಧರಿಸಿದೆ. ವೇತನ ಪರಿಷ್ಕರಣೆ ಸಂಬಂಧ ಶೇಕಾಡುವಾರು ಪ್ರಮಾಣವನ್ನ ನೌಕರರ ಸಂಘಟನೆಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ರಾಜ್ಯ ಸರ್ಕಾರ ತಿಳಿಸಿದೆ.