Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಾಕ್ಷ್ಯ ಕೊಡಿ, ಇಲ್ಲ ಕಾನೂನು ಕ್ರಮಕ್ಕೆ ಸಜ್ಜಾಗಿ; ಸ್ನೇಹಮಯಿ ಕೃಷ್ಣಗೆ ಶಾಲಿನಿ ರಜನೀಶ್‌ ಎಚ್ಚರಿಕೆ
ಕರ್ನಾಟಕಪ್ರಮುಖ

ಸಾಕ್ಷ್ಯ ಕೊಡಿ, ಇಲ್ಲ ಕಾನೂನು ಕ್ರಮಕ್ಕೆ ಸಜ್ಜಾಗಿ; ಸ್ನೇಹಮಯಿ ಕೃಷ್ಣಗೆ ಶಾಲಿನಿ ರಜನೀಶ್‌ ಎಚ್ಚರಿಕೆ

Share
2 Min Read
SHARE

https://youtube.com/shorts/tAQS6h_SZWA?si=vAoxcVAHQglCsru5

Subscribe ನ್ಯೂಸಿಕ್ಸ್ ಕನ್ನಡ

newsics.com

ಮುಡಾ ಪ್ರಕರಣದ ಆರೋಪಿ ಡಿ.ಬಿ. ನಟೇಶ್ ಅವರಿಗೆ ಲಂಚ ಪಡೆದು ಮುಂಬಡ್ತಿ ನೀಡಲಾಗಿದೆ ಎಂಬ ಸ್ನೇಹಮಯಿ ಕೃಷ್ಣ ಅವರ ಆರೋಪವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ತಳ್ಳಿಹಾಕಿದ್ದಾರೆ.

ಮುಡಾ ಪ್ರಕರಣದಲ್ಲಿ ಭ್ರಷ್ಟಾಚಾರ ಆರೋಪ ಹೊತ್ತಿರುವ ಡಿ.ಬಿ.ನಟೇಶ್ ಅವರಿಗೆ ಹಣ ಪಡೆದು ಮುಂಬಡ್ತಿ ನೀಡಲಾಗಿದೆ ಎಂಬ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಆರೋಪಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸುದೀರ್ಘ ಸ್ಪಷ್ಟಿಕರಣದ ಜೊತೆಗೆ ಎಚ್ಚರಿಕೆಯ ಸಂದೇಶವನ್ನೂ ಕೊಟ್ಟಿದ್ದಾರೆ.

2023 ನವೆಂಬರ್ 13 ರಂದು ತಾಂತ್ರಿಕ ಸಮಿತಿ ನೀಡಿದ್ದ ವರದಿ ಹಾಗೂ ನಿವೃತ್ತ ನ್ಯಾ.ಪಿ.ಎನ್‌.ದೇಸಾಯಿ ಅವರ ವರದಿಯನ್ನು 2025ಸೆ.4 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅಂಗೀಕರಿಸಿದ್ದು, ಇದರ ಆಧಾರದ ಮೇಲೆ ಮುಂಬಡ್ತಿ ನೀಡಲಾಗಿದೆ. ಈ ಎರಡೂ ವರದಿಗಳಲ್ಲಿ ನಟೇಶ್ ವಿರುದ್ಧದ ಆರೋಪಗಳು ನಿರಾಧಾರವಾಗಿವೆ ಎಂದು ಸ್ಪಷ್ಟಪಡಿಸಿದ್ದಾರೆ

ಮುಖ್ಯ ಕಾರ್ಯದರ್ಶಿ ನೀಡಿದ ಸ್ಪಷ್ಟನೆ ಏನು?

2024 ನ.11 ರಂದು ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1988 (ತಿದ್ದುಪಡಿ ಕಾಯ್ದೆ 2018) ರ ಕಲಂ 17(ಎ) ಅಡಿ ಡಿ.ಬಿ. ನಟೇಶ್ ವಿರುದ್ಧ ತನಿಖೆ ನಡೆಸಲು ಲೋಕಾಯುಕ್ತರಿಗೆ ರಾಜ್ಯ ಸರ್ಕಾರ ಅನುಮತಿ ನೀಡಿತ್ತು. ತನಿಖೆಯಲ್ಲಿ ಯಾವುದೇ ಹಸ್ತಕ್ಷೇಪ ಮಾಡಿರಲಿಲ್ಲ. ಕರ್ನಾಟಕ ನಾಗರೀಕ ಸೇವಾ (ಸಿಸಿಎ) ನಿಯಮಗಳು 1957ರ ನಿಯಮ 10ರ ಅಡಿ ಅಗತ್ಯ ಕಾರಣ ಕಂಡುಬರದ ಕಾರಣ ಅಮಾನತು ಮಾಡಿರಲಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಸ್ನೇಹಮಯಿ ಕೃಷ್ಣ ಅವರು ಮಾಡಿರುವ ಆರೋಪಗಳಿಗೆ ಯಾವುದೇ ಪುರಾವೆ ಇಲ್ಲ, ಆದ್ದರಿಂದಲೇ ನಿಯಮಾನುಸಾರ ನಟೇಶ್ ಅವರಿಗೆ ಮುಂಬಡ್ತಿ ನೀಡಲಾಗಿದೆ. ಮುಡಾ ತನಿಖೆಗೂ, ಮುಂಬಡ್ತಿಗೂ ಸಂಬಂಧವಿಲ್ಲ ಎಂದು ಶಾಲಿನಿ ರಜನೀಶ್ ತಿಳಿಸಿದ್ದಾರೆ.

ಲಂಚ ಪಡೆದು ಮುಂಬಡ್ತಿ ನೀಡಲಾಗಿದೆ ಎಂದು ಹಿರಿಯ ಅಧಿಕಾರಿಗಳ ವಿರುದ್ಧ ಮಾಡಿರುವ ಆರೋಪಗಳು ನಿರಾಧಾರವಾಗಿವೆ. ಯಾವುದೇ ಪೂರಕ ದಾಖಲೆಗಳಿಲ್ಲದೇ ಆರೋಪ ಮಾಡುವುದು ಸರಿಯಲ್ಲ. ಆಧಾರರಹಿತ ಆರೋಪ ಮಾಡಿರುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

ಸರ್ಕಾರದ ಆಸ್ತಿಯನ್ನು ಅಕ್ರಮವಾಗಿ ಭ್ರಷ್ಟಚಾರ ಅಥವಾ ಅಧಿಕಾರ ದುರ್ಬಳಕೆ ಮೂಲಕ ಕಬಳಿಸುವವರ ವಿರುದ್ಧ ಕಾನೂನು ಮತ್ತು ನಿಯಮಾವಳಿಗಳ ಪ್ರಕಾರ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ದೂರುದಾರರ ಆರೋಪವು ನಿರಾಧಾರವಾಗಿದ್ದು, ಅಧಿಕಾರಿಯನ್ನು ರಕ್ಷಣೆ ಮಾಡುವ ಪ್ರಮೇಯ ಉದ್ಭವಿಸುವುದಿಲ್ಲ.

ಪ್ರಕರಣದ ತನಿಖೆ, ವಿಚಾರಣೆಗಾಗಿ ಈಗಾಗಲೇ ಲೋಕಾಯುಕ್ತ ಸಂಸ್ಥೆಗೆ ಪೂರ್ವಾನುಮತಿ ನೀಡಿ, ಆದೇಶಿಸಲಾಗಿದೆ. ಪ್ರಕರಣದಲ್ಲಿ ಈಗಾಗಲೇ ಕಾನೂನು ಮತ್ತು ನಿಯಮಾನುಸಾರ ಕ್ರಮ ಕೈಗೊಂಡಿರುವುದರಿಂದ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವ ಪ್ರಶ್ನೆಯೂ ಉದ್ಭವಿಸುವುದಿಲ್ಲ ಎಂದು ಸ್ನೇಹಮಯಿ ಕೃಷ್ಣ ಆಕ್ಷೇಪಣೆಗೆ ಪ್ರತಿಕ್ರಿಯಿಸಿದ್ದಾರೆ.

ಡಿ.ಬಿ. ನಟೇಶ್‌ಗೆ ಮುಂಬಡ್ತಿ ನೀಡಲು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಲಂಚ ನೀಡಲಾಗಿದೆ ಎಂಬ ಸ್ನೇಹಮಯಿ ಕೃಷ್ಣ ಆರೋಪಕ್ಕೆ ತೀಕ್ಷ್ಮವಾಗಿ ಪ್ರತಿಕ್ರಿಯೆ ನೀಡಿರುವ ಅವರು, ವೃಥಾರೋಪ ಮಾಡಿದರೆ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ.ಎಂ.ಪಾರ್ವತಿ ಅವರಿಗೆ ಅನುಕೂಲಕರವಾಗಿ ಕೆಲಸ ಮಾಡಿರುವ ನಟೇಶ್ ವಿರುದ್ಧ ಭ್ರಷ್ಟಾಚಾರ ಆರೋಪಗಳಿದ್ದರೂ ಅವರನ್ನು ಅಮಾನತು ಮಾಡದೇ ಕೆಲಸದಲ್ಲಿ ಮುಂದುವರಿಸಲಾಗಿದೆ. ಜತೆಗೆ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಮುಂಬಡ್ತಿ ನೀಡಲಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಈ ಸಂಬಂದ ಪತ್ರ ಬರೆದಿದ್ದ ಸ್ನೇಹಮಯಿ ಕೃಷ್ಣ ಅವರು ಅಗತ್ಯ ಸ್ಪಷ್ಟನೆ ಕೇಳಿದ್ದರು.

ಉಚಿತ ಭಾಗ್ಯದ ವಿರುದ್ಧ ಸುಪ್ರೀಂ ಕೋರ್ಟ್ ಗರಂ!

TAGGED:Provide evidence... or face legal action; Shalini Rajneesh warns Snehamayi Krishna
Share This Article
Facebook Twitter Copy Link Print
Previous Article ಉಚಿತ ಭಾಗ್ಯದ ವಿರುದ್ಧ ಸುಪ್ರೀಂ ಕೋರ್ಟ್ ಗರಂ!
Next Article ಪ್ರಿಯಾಂಕಾ ಗಾಂಧಿ ಜೊತೆ ಕಾಮಾಕ್ಯ ದೇಗುಲಕ್ಕೆ ಭೇಟಿ ನೀಡಿದ ಡಿ.ಕೆ ಶಿವಕುಮಾರ್

Popular Posts

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

You Might Also Like

ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?