https://youtube.com/shorts/meQfr5hOsT4?si=–SvccKUHgJJVjWK
Subscribe ನ್ಯೂಸಿಕ್ಸ್ ಕನ್ನಡ
newsics.com
ಬೆಂಗಳೂರು: ನಂದಿನಿ ಹಾಲಿನ ಉತ್ಪನ್ನಗಳ ಕುರಿತು ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮೂಲಕ ಅಪಪ್ರಚಾರ ಮಾಡಿದ ಅರೋಪದಡಿ ವೈದ್ಯೆ ಶರಣ್ಯ ಪದ್ಮ ವಿರುದ್ಧ ಮಲ್ಲೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪದ್ಮಾವತಿ ಎಂಬುವರು ನೀಡಿದ ದೂರು ಆಧರಿಸಿ ಬಿಎನ್ಎಸ್ ಕಾಯ್ದೆ 353 (1) ಬಿ ಪ್ರಕಾರ ಸುಳ್ಳು ಮಾಹಿತಿ ಪ್ರಕರಣದಡಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮಕ್ಕಳ ಆರೋಗ್ಯದ ಕಾಳಜಿಯಿಂದ ನಾನು ಹೋರಾಟ ನಡೆಸುತ್ತಿದ್ದೇನೆ. ನನ್ನ ವೈಯಕ್ತಿಕ ಹಿತಾಸಕ್ತಿ ಇಲ್ಲ. ಕಳೆದ ಎರಡು ವರ್ಷಗಳಲ್ಲಿ ನಾನು ನನ್ನ ಮಗನಿಗೆ ಯಾವುದೇ ಔಷಧ ಕೊಟ್ಟಿಲ್ಲ, ಮಕ್ಕಳನ್ನು ನಾವು ಕೊಡುವ ಆಹಾರ ಪದ್ಧತಿ, ಜೀವನಶೈಲಿಯಿಂದ ಆರೋಗ್ಯವಾಗಿ ಸಾಕಬಹುದು. ಔಷಧಗಳನ್ನು ಹೆಚ್ಚೆಚ್ಚು ನೀಡಿದಷ್ಟು ಕರುಳಿನ ಆರೋಗ್ಯ ಹಾಳಾಗುತ್ತದೆ, ಆರೋಗ್ಯಕ್ಕೆ ಆಧಾರಸ್ತಂಭ ನಮ್ಮ ಆಹಾರ’ ಎಂದು ವಿಡಿಯೊ ಹೇಳಿಕೆಯಲ್ಲಿ ವಿವರಿಸಿದ್ದಾರೆ.
‘ಭಾರತೀಯ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರದಿಂದ (ಎಫ್ಎಸ್ಎಸ್ಎಐ) ಹೇಗೆ ಅನುಮೋದನೆ ಸಿಕ್ಕಿದೆ ಎಂಬುದು ಗೊತ್ತಿಲ್ಲ. ಎಫ್ಎಸ್ಎಸ್ಎಐ ಅನುಮೋದನೆ ಆಗಿದೆ ಅಂದರೆ, ಉತ್ತಮ ಆಹಾರ ಎಂದು ಭಾವಿಸಿಕೊಳ್ಳುತ್ತಾರೆ. ಈ ರೀತಿಯ ಉತ್ಪನ್ನಗಳಿಗೆ ಅನುಮೋದನೆ ನೀಡುವವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಆ ವಿಡಿಯೊದಲ್ಲಿ ವೈದ್ಯೆ ಒತ್ತಾಯಿಸಿದ್ದಾರೆ.
ಫೆ.8ರಂದು ನಂದಿನಿ ಉತ್ಪನ್ನಗಳ ಬಗ್ಗೆ ಶರಣ್ಯಾ ಪದ್ಮಾ ಅವರು ‘ರೀಲ್ಸ್’ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು.
ಇದುವರೆಗೂ ಕೆಎಎಫ್ ಉತ್ಪನ್ನಗಳ ಬಗ್ಗೆ ಯಾವುದೇ ದೂರು ಬಂದಿಲ್ಲ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು. ಕೆಎಂಎಫ್ ಉತ್ಪನ್ನಗಳಿಗೆ ಯಾವುದೇ ಕೆಮಿಕಲ್ ಹಾಕಲ್ಲ. ಈಗಾಗಲೇ ಡಾ.ಶರಣ್ಯ ವಿರುದ್ಧ ಕೇಸ್ ದಾಖಲಿಸಲಾಗಿದೆ. ಕೆಎಂಎಫ್ ಉತ್ಪನ್ನಗಳ ಬಗ್ಗೆ ಇದೇ ರೀತಿ ಸುಳ್ಳು ಸುದ್ದಿ ಹಬ್ಬಿಸಿದ್ದರೆ ಕ್ರಮಕೈಗೊಳ್ಳಲಾಗುತ್ತದೆ. ಕೆಎಂಎಫ್ ಉತ್ಪನ್ನಗಳು ತುಂಬಾ ಸೇಫ್, ಯಾವುದೇ ಭಯವಿಲ್ಲದೆ ಬಳಸುವಂತೆ ಗ್ರಾಹಕರಿಗೆ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ ತಿಳಿಸಿದ್ದಾರೆ.
https://www.newsics.com/2026/02/21/aunt-strangles-2-year-old-child-to-death-in-park/