newsics.com
ನವದೆಹಲಿ: 530 ದಿನಗಳ ಬಳಿಕ ಎಎಪಿ ನಾಯಕ ಮನೀಶ್ ಸಿಸೋಡಿಯಾ ಶುಕ್ರವಾರ ಸಂಜೆ ದೆಹಲಿಯ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಹೊಸ ಮದ್ಯ ನೀತಿ ಹಗರಣದ ಆರೋಪ ಎದುರಿಸುತ್ತಿದ್ದ ಮಾಜಿ ಡಿಸಿಎಂಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿತು. ಜೈಲಿನಿಂದ ಹೊರಬಂದ ಸಿಸೋಡಿಯಾರನ್ನು ಎಎಪಿ ಬೆಂಬಲಿಗರು ಸಂಭ್ರಮದಿಂದ ಬರಮಾಡಿಕೊಂಡರು.
ನಿಮ್ಮ ಪ್ರೀತಿ, ದೇವರ ಆಶೀರ್ವಾದ ಮತ್ತು ಸತ್ಯದ ಶಕ್ತಿಯಿಂದ, ಎಲ್ಲಕ್ಕಿಂತ ಮುಖ್ಯವಾಗಿ ಬಾಬಾಸಾಹೇಬರ ಕನಸಿನಿಂದಾಗಿ ನಾನು ಜೈಲಿನಿಂದ ಹೊರಬಂದಿದ್ದೇನೆ. ಯಾವುದೇ ಸರ್ವಾಧಿಕಾರಿ ಸರ್ಕಾರ ಅಧಿಕಾರಕ್ಕೆ ಬಂದರೆ ಮತ್ತು ಸರ್ವಾಧಿಕಾರದ ಕಾನೂನುಗಳನ್ನು ರಚಿಸಿ ವಿರೋಧ ಪಕ್ಷದ ನಾಯಕರನ್ನು ಕಂಬಿ ಹಿಂದೆ ಹಾಕಿದರೆ, ಆಗ ದೇಶದ ಸಂವಿಧಾನವು ಅವರನ್ನು ರಕ್ಷಿಸುತ್ತದೆ ಎಂದು ಸಿಸೋಡಿಯಾ ಭರವಸೆ ವ್ಯಕ್ತಪಡಿಸಿದ್ದಾರೆ.